August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗಮಕ ವಾಚನ ಪ್ರವಚನ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತ , ಹಿಂದಿ ಹಾಗೂ ಕನ್ನಡ ಭಾಷೆಗಳ ಭಾಷಾ ವೇದಿಕೆಯಾದ ‘ ಸಂಹಿಕ ‘ ದ ವತಿಯಿಂದ ಹಳಗನ್ನಡ ಭಾಷೆ, ಕಾವ್ಯಗಳ ಪರಿಚಯದ ಉದ್ದೇಶದಿಂದ ತೊರವೆ ರಾಮಾಯಣದಿಂದ ಆಯ್ದ ‘ ತಾಟಕಿ ವಧೆ ಹಾಗೂ ಅಹಲ್ಯಮೋಕ್ಷ ‘ ಎಂಬ ಕಥಾ ಭಾಗವನ್ನು ಗಮಕ ವಾಚನ ಪ್ರವಚನದ ಮೂಲಕ ಪ್ರಸ್ತುತಪಡಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ ವಿನೂತನ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ವಾಚನಕಾರರಾಗಿ ಸಂಖ್ಯಾಶಾಸ್ತ್ರ ಉಪನ್ಯಾಸಕಿ ಅಮೃತಾ ಎನ್ , ಪ್ರವಚನದಲ್ಲಿ ಶ್ರೀರಾಮನಾಗಿ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್, ವಿಶ್ವಾಮಿತ್ರರಾಗಿ ಕನ್ನಡ ಭಾಷಾ ಉಪನ್ಯಾಸಕ ಡಾ.ಮಹಾವೀರ ಜೈನ್ ಇಚ್ಲಂಪಾಡಿ ಇವರು ಭಾಗವಹಿಸಿದರು.

ಸಭಾ ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ರಾಜೇಶ್ ಬಿ, ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನ ಕುಮಾರ ಐತಾಳ್, ಹಿಂದಿ ವಿಭಾಗದ ಮುಖ್ಯಸ್ಥರಾದ ನಾಗರಾಜ ಭಂಡಾರಿ ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ವೇಣೂರು ವಿ.ಹಿಂ.ಪ. ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆ

Suddi Udaya

ಗುರುವಾಯನಕೆರೆ: ಕೆರೆಯನ್ನು ಅಭಿವೃದ್ಧಿ ಪಡಿಸಲು ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

Suddi Udaya

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

Suddi Udaya

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

Suddi Udaya

ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಗೆ ಎಸ್‌ಡಿಎಂ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆ

Suddi Udaya
error: Content is protected !!