July 14, 2026
Uncategorized

ಉಡುಪಿಯ ಪೇಜಾವರ ಮಠಾಧೀಶರು ಪವಿತ್ರ ಕ್ಷೇತ್ರವಾದ ಶ್ರೀ ಮಧ್ವ ಮಂಟಪಕ್ಕೆ ಭೇಟಿ

ಕಲಿಯುಗದಲ್ಲಿ ಪರಿಶುದ್ದವಾದ ಮನಸ್ಸಿನಿಂದ ಭಗವಂತನ ಸ್ಮರಣೆ ಅತ್ಯಗತ್ಯ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಪುಂಜಾಲಕಟ್ಟೆ : ಉಡುಪಿಯ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಜು.13 ಸೋಮವಾರ ಕಾವಳಪಡೂರು ಗ್ರಾಮದ ಮಧ್ವದಲ್ಲಿರುವ ಶ್ರೀ ಮಧ್ವಾಚಾರ್ಯರು ವಿಶ್ರಾಂತಿ ಪಡೆದ ಪವಿತ್ರ ಕ್ಷೇತ್ರವಾದ ಶ್ರೀ ಮಧ್ವ ಮಂಟಪಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕ ಮಧ್ವ ಹಾಗೂ ಯಕ್ಷಕೂಟ ಮಧ್ವ ವತಿಯಿಂದ ಭಕ್ತಿಪೂರ್ವಕವಾಗಿ ಗೌರವ ಸಲ್ಲಿಸಲಾಯಿತು.

ಈ ಸಂದರ್ಭ ಆಶೀರ್ವಚನ ನೀಡಿದ ಶ್ರೀಗಳು ದೇವರು ಸಮಾಜದಲ್ಲಿರುವ ಎಲ್ಲರ ಹೃದಯದಲ್ಲು ನೆಲೆಸಿದ್ದಾನೆ‌. ಕಲಿಯುಗದಲ್ಲಿ ಪರಿಶುದ್ದವಾದ ಮನಸ್ಸಿನಿಂದ ಭಗವಂತನ ಸ್ಮರಣೆ ಅತ್ಯಗತ್ಯವಾಗಿದೆ ಎಂದರು.
ಇದೇ ವೇಳೆ ಶ್ರೀ ಮಧ್ವ ಮಂಟಪದಲ್ಲಿ ಬಾಲಗೋಕುಲ, ಕುಣಿತ ಭಜನೆ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿಯಮಿತವಾಗಿ ನಡೆಸಲು ಸ್ಥಳಾವಕಾಶ ಕಲ್ಪಿಸಬೇಕೆಂದು ಶ್ರೀಗಳಿಗೆ ಮನವಿ ಸಲ್ಲಿಸಲಾಯಿತು.
ಶ್ರೀ ಮಧ್ವ ಮಂಟಪದ ವ್ಯವಸ್ಥಾಪಕರಾದ ರಾಘವೇಂದ್ರ ಭಟ್ ಮಠ ಮದ್ದಡ್ಕ, ಯಕ್ಷಕೂಟ ಮಧ್ವ ಇದರ ಸಂಚಾಲಕ ಭಾಸ್ಕರ ಶೆಟ್ಟಿ ಮಧ್ವ, ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ಪದಾಧಿಕಾರಿಗಳು, ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Related posts

ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಉಜಿರೆ ಮೋಹನ್ ಕುಮಾರ್ ಮಾಲಕತ್ವದ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಾಲಾಡಿ ಯುವಕ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

Suddi Udaya
error: Content is protected !!