ಮಿತ್ತಬಾಗಿಲು: ಕೊಲ್ಲಿ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಸಮಾಲೋಚನಾ ಸಭೆಯು ಜು.13ರಂದು ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷೆ ವನಿತಾ ವಹಿಸಿದರು. ಈ ವೇಳೆ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೇಶವ ಫಡಕೆ ಸಲಹೆ ಸೂಚನೆಯನ್ನು ನೀಡಿ ಆ.28ರಂದು 25ನೇ ವರ್ಷದ ಪ್ರಯುಕ್ತ ಸಾರ್ವಜನಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ದುರ್ಗಾಪೂಜೆಯನ್ನು ಸಂಭ್ರಮದಿಂದ ಆಚರಿಸುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಕೃಷ್ಣಪ್ಪ ಪೂಜಾರಿ, ಮಿತ್ತಬಾಗಿಲು ಗ್ರಾ. ಪಂ. ಉಪಾಧ್ಯಕ್ಷೆ ವಿಜಯಲಕ್ಷ್ಮೀ, ಸಮಿತಿಯ ಕಾರ್ಯದರ್ಶಿ ಮೀನಾಕ್ಷಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಜ್ಯೋತಿ ಸ್ವಾಗತಿಸಿ, ಜಾನಕಿ ಧನ್ಯವಾದವಿತ್ತರು.
















