July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜು.16ರಿಂದ ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ವಾಚನ-ಪ್ರವಚನ

ಧರ್ಮಸ್ಥಳ: ಧರ್ಮಸ್ಥಳದಲ್ಲಿ 55 ನೇ ವರ್ಷದ ಪುರಾಣ-ಪ್ರವಚನ ಕಾರ್ಯಕ್ರಮವು ಜು.16 ರಿಂದ ಸೆಪ್ಟೆಂಬರ್ 17ರ ವರೆಗೆ ನಡೆಯಲಿದೆ. ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6.30ರಿಂದ 8ಗಂಟೆ ವರೆಗೆ ಪುರಾಣ ವಾಚನ-ಪ್ರವಚನ ನಡೆಯಲಿದ್ದು, ಖ್ಯಾತ ವಿದ್ವಾಂಸರು ಹಾಗೂ ಕಲಾವಿದರಿಂದ ಕುಮಾರವಾಲ್ಮೀಕಿ ವಿರಚಿತ “ತೊರವೆ ರಾಮಾಯಣ”ದ ವಾಚನ-ಪ್ರವಚನ ನಡೆಸಿಕೊಡುತ್ತಾರೆ.

ಶನಿವಾರ ಮತ್ತು ಭಾನುವಾರಗಳಲ್ಲಿ ವಿವಿಧ ಕಾವ್ಯಗಳ ಆಯ್ದ ಭಾಗಗಳನ್ನು ವಾಚನ-ಪ್ರವಚನಕ್ಕೆ ಬಳಸಲಾಗುವುದು.
ಜು.16 ರಂದು ಗುರುವಾರ ಮತ್ತು 17 ರಂದು ಶುಕ್ರವಾರ ಗಣಪತಿ ಭಟ್ ಪದ್ಯಾಣ ವಾಚನಕಾರರಾಗಿಯೂ, ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಪ್ರವಚನಕಾರರಾಗಿಯೂ ಭಾಗವಹಿಸುವರು.


ಉದ್ಘಾಟನಾ ಸಮಾರಂಭ: ಜುಲೈ 16 ರಂದು ಸಂಜೆ 5 ಗಂಟೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಸದ್ಗುರು ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸುವರು.


ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು ಎಂದು ಪುರಾಣ ವಾಚನ-ಪ್ರವಚನ ಸಮಿತಿಯ ಸಂಚಾಲಕರಾದ ಎ.ವಿ. ಶೆಟ್ಟಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya

ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿತುಳು ನಾಡು-ನುಡಿ-ಸಂಸ್ಕೃತಿ ಒರಿಪಾವುನ ಬುಳೆಪಾವುನ ಮಾರ್ಗೋಪಾಯೊಲು” ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ರಾಷ್ಟ್ರೀಯ ನ್ಯಾಚುರೋಪಥಿ ಉತ್ಸವದಲ್ಲಿ ಎಸ್.ಡಿ.ಎಂ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

Suddi Udaya
error: Content is protected !!