26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಮುಳಿಯ ಜ್ಯುವೆಲ್ಲರ್ಸ್ ವತಿಯಿಂದ ಪಡ್ಲಾಡಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ಬೆಳ್ತಂಗಡಿ: ದ.ಕ. ಜಿ ಪಂ ಹಿರಿಯ ಪ್ರಾಥಮಿಕ ಶಾಲೆ ಪಡ್ಲಾಡಿ ಲಾಯಿಲ, ಇಲ್ಲಿನ ಮಕ್ಕಳಿಗೆ ಮುಳಿಯ ಜ್ಯುವೆಲ್ಲರ್ಸ್ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆಯು ಜು 11 ನಡೆಯಿತು.

ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ,ಪುಸ್ತಕ ಸೇರಿದಂತೆ ಇನ್ನೂ ಅನೇಕ ರೀತಿಯ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಕಾರ್ಯ ಮುಳಿಯ ಜ್ಯುವೆಲ್ಲರ್ಸ್ ಮಾಡುತ್ತಿರುವುದು ಅಭಿನಂದನೀಯ , ಲಾಭದ ಒಂದು ಪಾಲು ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ವಿನಿಯೋಗಿಸುವ ಮೂಲಕ ಮಾದರಿ ಕಾರ್ಯಕ್ರಮಗಳನ್ನು ಮಾಡುತ್ತಿರುವ ಮುಳಿಯ ಜ್ಯುವೆಲ್ಲರ್ಸ್ ಪಾರದರ್ಶಕ ವ್ಯವಹಾರ , ಸಿಬ್ಬಂದಿಗಳ ನಗುಮೊಗದ ಸೇವೆಯಿಂದ  ಈಗಾಗಲೇ  ತಾಲೂಕಿನ ಜನತೆಯ ಪ್ರೀತಿಯ ಆಭರಣ ಮಳಿಗೆಯಾಗಿ ಬೆಳೆದಿದೆ.  ಸಂಸ್ಥೆ ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಪತ್ರಕರ್ತ ಮಾಜಿ ಗ್ರಾ.ಪಂ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಈ ವೇಳೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮುಳಿಯ ಜ್ಯುವೆಲ್ಲರ್ಸ್ ಸಿಬ್ಬಂದಿಗಳಾದ ವಿನಯಚಂದ್ರ, ಅಭಿಷೇಕ್ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ಮಧು ಎಚ್ ಸಿ. ಸ್ವಾಗತಿಸಿದರು. ಶಿಕ್ಷಕರುಗಳಾದ ಕರುಣಾಕರ ಎನ್. ಶಾಂತಾ ಸಹಕರಿಸಿದರು.

Related posts

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ವಾಣಿ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿ ಕು|ಧೃತಿ ಸಿ. ಗೌಡರಿಗೆ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಮಹಿಳಾ ಐ.ಟಿ.ಐ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಹಾಗೂ ಭಿತ್ತಿ ಪತ್ರಿಕೆ ಅನಾವರಣ

Suddi Udaya

ಪೆರೋಡಿತ್ತಾಯಕಟ್ಟೆ ಸ. ಉ. ಪ್ರಾ. ಶಾಲಾ ಮೂವರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮಲವಂತಿಗೆ: ಪಾಮಾಜಿ -ಕೊಲ್ಲಿ ರಸ್ತೆಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಲಾಯಿಲ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಂಪನ್ನ: ಶ್ರೀ ಭೂತ ಬಲಿ

Suddi Udaya
error: Content is protected !!