26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್‌, ಅರ್ವ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಬೆಳ್ತಂಗಡಿ:ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್‌, ಅರ್ವ/ಬೆಳ್ತಂಗಡಿ ವತಿಯಿಂದ 2026ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾಗಿ ಇಂಜಿನಿಯರಿಂಗ್ (B.E/B.Tech) ಅಥವಾ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಪಡೆದಿರುವ ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಬೆಳ್ತಂಗಡಿ ತಾಲೂಕಿನ ನಿವಾಸಿಗಳಾಗಿರಬೇಕು. ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ ಶೇ.70 ಅಂಕಗಳನ್ನು ಪಡೆದಿರಬೇಕು. ಮಾನ್ಯತೆ ಪಡೆದ ಇಂಜಿನಿಯರಿಂಗ್ ಅಥವಾ ಡಿಪ್ಲೊಮಾ ಕಾಲೇಜಿಗೆ ಪ್ರವೇಶ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.3 ಲಕ್ಷಕ್ಕಿಂತ ಕಡಿಮೆಯಿರಬೇಕು. ಅರ್ಜಿ ಸಲ್ಲಿಸಲು ಜುಲೈ 30, 2026 ಕೊನೆಯ ದಿನವಾಗಿದೆ. ವಿದ್ಯಾರ್ಥಿವೇತನದ ಮೊತ್ತವನ್ನು ಟ್ರಸ್ಟ್‌ನ ವಿವೇಚನೆಯಂತೆ ನಿಗದಿಪಡಿಸಲಾಗುವುದು. ಅರ್ಜಿ ಸಲ್ಲಿಸಲು https://forms.gle/eCUPzovjfAV5MChx8


ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿವೇತನ ನೀಡಲಾಗುವುದರಿಂದ ಅರ್ಹ ವಿದ್ಯಾರ್ಥಿಗಳು ಶೀಘ್ರವಾಗಿ ಅರ್ಜಿ ಸಲ್ಲಿಸುವಂತೆ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಈ ನಂಬರಿಗೆ 9480505007 ಸಂಪರ್ಕಿಸುವಂತೆ ತಿಳಿಸಲಾಗಿದೆ. [email protected] ಇ-ಮೇಲ್ ಮೂಲಕ ಸಂಪರ್ಕಿಸಬಹುದಾಗಿದ್ದು, ಗೂಗಲ್ ಫಾರ್ಮ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು‌ ಸಂಘಟಕರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ’ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ

Suddi Udaya

ಹತ್ಯಡ್ಕ: ದರ್ಭೆತಡ್ಕ ನಿವಾಸಿ ಶ್ರೀಮತಿ ಪದ್ಮಾಕ್ಷಿ ಗೋಗಟೆ ನಿಧನ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೇರ ಸಂದರ್ಶನ

Suddi Udaya

ಕೊಕ್ಕಡ : ಮುಂಡೂರುಪಳಿಕೆ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!