July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಕಾಲೇಜಿನಲ್ಲಿ ‘ ಇಕೋ-ವಿಷನ್ ‘ ಸಂಘ ಪದಗ್ರಹಣ ಸಮಾರಂಭ

ಉಜಿರೆ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ನಾನ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಿಕೊಟ್ಟಿದೆ. ಇದನ್ನು ಸಕ್ರೀಯವಾಗಿ ಬಳಸಿಕೊಂಡು ಭವಿಷ್ಯದ ಅವಕಾಶಗಳನ್ನು ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳು ಜವಾಬ್ದಾರಿಯುತ ಪ್ರಜೆಗಳಾದಗ ಸಶಕ್ತ ಮತ್ತು ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುತ್ತದೆ. ಶೈಕ್ಷಣಿಕ ಸಾಧನೆಯೊಂದಿಗೆ ಸಾಮಾಜಿಕ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಮಾದರಿಯಾಗುವ ವ್ಯಕ್ತಿತ್ವವನ್ನು ರೂಪಿಸಿಕೊಳ್ಳೋಣ ಎಂದು ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎ. ಜಯಕುಮಾರ್ ಶೆಟ್ಟಿ ಅಭಿಪ್ರಾಯಪಟ್ಟರು.

ಇವರು ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ ಅರ್ಥ ಶಾಸ್ತ್ರ ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗದ ವತಿಯಿಂದ ಆಯೋಜಿಸಿದ್ದ ಇಕೋ-ವಿಷನ್ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅರ್ಥ ಶಾಸ್ತ್ರ ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗದ ಮುಖ್ಯಸ್ಥ ಡಾ. ಗಣರಾಜ ಕೆ. ಪ್ರಾಸ್ತಾವಿಕ ಮಾತುಗಳನ್ನಾಡಿ ವಿಭಾಗದ ಶೈಕ್ಷಣಿಕ ಚಟುವಟಿಕೆಗಳ ಮಾಹಿತಿಯನ್ನು ಹಂಚಿಕೊಂಡರು. ಇಕೋ-ವಿಷನ್ ಸಂಘದ ವಿದ್ಯಾರ್ಥಿ ಸಂಚಾಲಕರಾಗಿ ತೃತೀಯ ಬಿ.ಎ. ವಿದ್ಯಾರ್ಥಿಗಳಾದ ನೆವಿಲ್ ಮತ್ತು ಕವನ ಸೇರಿದಂತೆ ಒಟ್ಟು 15 ವಿದ್ಯಾರ್ಥಿಗಳು ಪದಗ್ರಹಣ ಮಾಡಿದರು. ಬಳಿಕ ವಿದ್ಯಾರ್ಥಿಗಳು ರಚಿಸಿದ ಬಿತ್ತಿ ಪತ್ರಿಕೆಯ ಅನಾವರಣ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ವಿಭಾಗದ ಉಪನ್ಯಾಸಕರಾದ ಅಭಿನಂದನ್ ಜೈನ್ ಹಾಗೂ ನಾಗರಾಜ್ ಪೂಜಾರಿ ಸೇರಿದಂತೆ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಇಕೋ-ವಿಷನ್ ಸಂಘದ ಸಂಚಾಲಕ ಹಾಗೂ ಪ್ರಾಧ್ಯಾಪಕ ಡಾ. ಮಹೇಶ್ ಕುಮಾರ್ ಶೆಟ್ಟಿ ಎಚ್. ಕಾರ್ಯಕ್ರಮವನ್ನು ಸಂಯೋಜಿಸಿ ವಂದಿಸಿದರು.

Related posts

ಎಸ್.ಕೆ. ಗೋಲ್ಡ್‌ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ಗುರುವಾಯನಕೆರೆ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

Suddi Udaya

ಮಚ್ಚಿನ ಪ್ರಾಥಮಿಕ ಶಾಲೆ ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ಶಾಲಾ ಅಭಿವೃದ್ಧಿ ಸಮಿತಿಯಿಂದ ರಕ್ಷಿತ್ ಶಿವರಾಂ ರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಮಂಗಳೂರು ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!