27.1 C
ಪುತ್ತೂರು, ಬೆಳ್ತಂಗಡಿ
July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಚ್ಚಲು ಅಕ್ಕಿ ವಿತರಣೆಗೆ ಒತ್ತಾಯಿಸಿ ನ್ಯಾಯಬೆಲೆ ಅಂಗಡಿಗಳ ಮುಂದೆ ಎಸ್‌ಡಿಪಿಐ ಸಾಂಕೇತಿಕ ಪ್ರತಿಭಟನೆ

ಬೆಳ್ತಂಗಡಿ : “ನಮ್ಮ ಆಹಾರ – ನಮ್ಮ ಹಕ್ಕು” ಕರಾವಳಿಯ ತಟ್ಟೆಗೆ ಕುಚ್ಚಲು ಬೇಕು ಎಂಬ ಘೋಷಣೆಯೊಂದಿಗೆ ಪಡಿತರ ಅಂಗಡಿಗಳ ಮೂಲಕ ಕುಚ್ಚಲು ಅಕ್ಕಿಯನ್ನು ವಿತರಿಸುವಂತೆ ಆಗ್ರಹಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಇಂದು ಬೆಳ್ತಂಗಡಿ ಕ್ಷೇತ್ರಾದ್ಯಂತ ಸಾಂಕೇತಿಕ ಪ್ರತಿಭಟನೆ ನಡೆಯಿತು.

ಬೆಳ್ತಂಗಡಿ, ಉಜಿರೆ, ಸುನ್ನತ್ ಕೆರೆ, ಪುಂಜಾಲಕಟ್ಟೆ ಹಾಗೂ ಕಲ್ಲೇರಿ ನ್ಯಾಯಬೆಲೆ ಅಂಗಡಿಗಳ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಊರಿನ ನಾಗರಿಕರು ಆಹಾರ ಪದ್ಧತಿಗೆ ಅನುಗುಣವಾಗಿ ಕುಚ್ಚಲು ಅಕ್ಕಿಯನ್ನು ಪಡಿತರ ವ್ಯವಸ್ಥೆಯ ಮೂಲಕ ವಿತರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ, ಬ್ಲಾಕ್ ಹಾಗೂ ಬ್ರಾಂಚ್ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಸ.ಹಿ.ಪ್ರಾ.ಶಾಲೆ ಕುಂಟಾಲಪಲ್ಕೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಎಕ್ಸೆಲ್ ಪಿಯು ಕಾಲೇಜಿನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ ಹಾಗೂ ಎಕ್ಸೆಲ್ ಸ್ವಚ್ಛತಾ ಅಭಿಯಾನ

Suddi Udaya

ಮಾಲಾಡಿ: ಪೆರ್ಡೆ ಕ್ರಾಸ್ – ಊರ್ಲ ರಸ್ತೆ ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ

Suddi Udaya

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

Suddi Udaya

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya
error: Content is protected !!