23.6 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಮೀಲಾದ್ ಸ್ವಾಗತ ಸಮಿತಿ ರಚನೆ

ನಾವೂರು: ಮುಹಿಯುದ್ದೀನ್ ಜುಮಾ ಮಸೀದಿ, ಮುರ-ನಾವೂರಿನಲ್ಲಿ 2026ನೇ ಸಾಲಿನ ಮೀಲಾದ್ ಸ್ವಾಗತ ಸಮಿತಿಯನ್ನು ಜಮಾಅತ್ ಕಮಿಟಿಯ ಅಧ್ಯಕ್ಷ ಇಬ್ರಾಹಿಂ ಸಿ.ಎಂ. ಅವರ ಅಧ್ಯಕ್ಷತೆಯಲ್ಲಿ ರಚಿಸಲಾಯಿತು.

ಸಮಿತಿಯ ಅಧ್ಯಕ್ಷರಾಗಿ ಸುಲೇಮಾನ್ ಪಿ.ವೈ., ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಖಾದರ್ ನಾವೂರು, ಕೋಶಾಧಿಕಾರಿಯಾಗಿ ಶಹೀರ್ ನಾವೂರು ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ತಾಜುದ್ದೀನ್ ಕಿರ್ನಡ್ಕ ಹಾಗೂ ಇಬ್ರಾಹಿಂ ಪಿ.ಎ., ಜೊತೆ ಕಾರ್ಯದರ್ಶಿಗಳಾಗಿ ಈಸಾ ಕೇಳ್ತಾಜೆ ಮತ್ತು ಅಶ್ರಫ್ ಡಿ.ಎಂ. ಅವರನ್ನು ನೇಮಕ ಮಾಡಲಾಯಿತು. ಇವರನ್ನೊಳಗೊಂಡ ಒಟ್ಟು 26 ಸದಸ್ಯರ ಸ್ವಾಗತ ಸಮಿತಿಯನ್ನು ರಚಿಸಲಾಯಿತು.

ಸಭೆಯಲ್ಲಿ ಪ್ರಸಕ್ತ ಸಾಲಿನ ಮೀಲಾದ್ ಕಾರ್ಯಕ್ರಮ, ನಬಿದಿನ ರ್ಯಾಲಿ ಹಾಗೂ ಮದರಸ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವ ಕುರಿತು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಮುಹಿಯುದ್ದೀನ್ ಜುಮಾ ಮಸೀದಿಯ ಖತೀಬರಾದ ಬಹು. ಬಶೀರ್ ಸಅದಿ ಕೆಮ್ಮಾರ ಅವರು ದುಆ ಹಾಗೂ ಆಶೀರ್ವಚನ ನೀಡಿದರು.

ಮುಹಿಯುದ್ದೀನ್ ಜುಮಾ ಮಸೀದಿ ಮುರ-ನಾವೂರಿನ ಪ್ರಧಾನ ಕಾರ್ಯದರ್ಶಿ ಜಲೀಲ್ ಪಡಂಬಿಲ ಸ್ವಾಗತಿಸಿ, ಕಾರ್ಯದರ್ಶಿ ಖಾದರ್ ನಾವೂರು ವಂದಿಸಿದರು.

Related posts

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಗೆ ನಾರಾಯಣ ಬೇಗೂರು ಭೇಟಿ, ಶಾಲೆಯ ಅಭಿವೃದ್ಧಿಗೆ ನೆರವು ನೀಡುವ ಭರವಸೆ

Suddi Udaya

ಉಜಿರೆ ಶ್ರೀ ವನದುರ್ಗಾ ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ದುರ್ಗಾಪೂಜೆ, ಆಶ್ಲೇಷ ಬಲಿ, ರಂಗಪೂಜೆ

Suddi Udaya

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

Suddi Udaya

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾದ‌ಲ್ಲಿ ದೈವಗಳ ಪ್ರತಿಷ್ಠಾ ಕಾರ್ಯಕ್ರಮ‌ ಹಾಗೂ ನೇಮೋತ್ಸವ

Suddi Udaya

ನಮ್ಮ ಟಿವಿಯ ‘ಬಲೆ ಚಾತುರ್ಪು ತೋಜಾಲೆ’ ರೀಯಾಲಿಟಿ ಶೋ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಪ್ರಥಮ ಸ್ಥಾನ

Suddi Udaya
error: Content is protected !!