30.1 C
ಪುತ್ತೂರು, ಬೆಳ್ತಂಗಡಿ
July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಸೌತಡ್ಕ ಅಂಗನವಾಡಿಯಲ್ಲಿ ಆಟಿಕೆಗಳ ಮಧ್ಯೆ ಅಡಗಿದ್ದ ಹಾವು ಕಚ್ಚಿ 4 ವರ್ಷದ ಬಾಲಕಿ ಆಸ್ಪತ್ರೆಗೆ ದಾಖಲು

ಕೊಕ್ಕಡ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿದ ಆತಂಕಕಾರಿ ಘಟನೆ ಜು.14 ರಂದು ನಡೆದಿದೆ. ಹಾವು ಕಚ್ಚಿದ ಪರಿಣಾಮ ಅಸ್ವಸ್ಥಗೊಂಡ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಹಾವು ಕಚ್ಚಿದ ಬಾಲಕಿಯನ್ನು ಮಲ್ಲಿಗೆಮಜಲು ಮಸೀದಿಯ ಅಧ್ಯಕ್ಷ ಸಿಯಾಬ್ ಅವರ ಪುತ್ರಿ ಪಾತಿಮತ್ ಸಹದಿಯಾ(4) ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ ಪಾತಿಮತ್ ಸಹದಿಯಾ ಎಂದಿನಂತೆ ಅಂಗನವಾಡಿಗೆ ತೆರಳಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದಳು. ಈ ವೇಳೆ ತರಗತಿ ಕೊಠಡಿಯೊಳಗೆ ಮಕ್ಕಳ ಆಟಿಕೆಗಳ ನಡುವೆ ಅಡಗಿದ್ದ ಹಾವು ಬಾಲಕಿಗೆ ಕಚ್ಚಿದೆ ಎನ್ನಲಾಗಿದೆ. ಹಾವು ಕಚ್ಚಿದ ತಕ್ಷಣ ಬಾಲಕಿ ಜೋರಾಗಿ ಅಳಲು ಆರಂಭಿಸಿದ್ದು, ಇದನ್ನು ಗಮನಿಸಿದ ಅಂಗನವಾಡಿ ಸಹಾಯಕಿ ಕೂಡಲೇ ಬಾಲಕಿಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಘಟನೆ ನಡೆದ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ಬಿ.ಎಲ್.ಓ. ಕರ್ತವ್ಯದ ನಿಮಿತ್ತ ಹೊರಗಡೆ ತೆರಳಿದ್ದರಿಂದ ಕೇಂದ್ರದಲ್ಲಿ ಸಹಾಯಕಿ ಮಾತ್ರ ಕರ್ತವ್ಯದಲ್ಲಿದ್ದರು ಎಂದು ತಿಳಿದುಬಂದಿದೆ.

ಬಾಲಕಿಯನ್ನು ತಕ್ಷಣ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಯಿತು. ಬಳಿಕ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿಂದ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ರವಾನಿಸಿದ್ದು, ಅಲ್ಲಿ ತುರ್ತು ನಿಗಾ ಘಟಕದಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ – ಸಿಯೋನ್ ಆಶ್ರಮಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಉಜಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಅಳದಂಗಡಿ: ನೊಚ್ಚ ಮನೆತನದ ಕುವರಿ ನಿಯತಿ ಅಮೇರಿಕಾದಲ್ಲಿ ಯಕ್ಷಗಾನ ನಾಟ್ಯ ಪ್ರದರ್ಶನ

Suddi Udaya

ಡಿ.29-31: ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ಎಲ್. ನಿಯೋಜನೆ

Suddi Udaya

ಗುರುವಾಯನಕೆರೆಯ ಕಂದಡಿಗುಡ್ಡೆ ನಿವಾಸಿ ಶ್ರೀಮತಿ ಲೀಲಾವತಿ ನಿಧನ

Suddi Udaya
error: Content is protected !!