29.8 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ನವೀಕೃತಗೊಂಡ ಆರೋಗ್ಯ ವಿಮಾ ಯೋಜನೆಯ ವಿಭಾಗ ಲೋಕಾರ್ಪಣೆ     

ಉಜಿರೆ : NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ  ವಿನೂತನ ಮಾದರಿಯ ನವೀಕೃತಗೊಂಡ  ಆರೋಗ್ಯ ವಿಮಾ ಯೋಜನೆಗೆ ಸಂಬಂಧಿಸಿಂದ ವಿಭಾಗವನ್ನು ಜನಾರ್ಧನ ಸ್ವಾಮಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ   ಶರತ್ ಕೃಷ್ಣ ಪಡವೆಟ್ನಾಯ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು .

ಈ ಸಂದರ್ಭದಲ್ಲಿ  ಮಾತನಾಡುತ್ತ ಇತ್ತೀಚಿನ ದಿನಗಳಲ್ಲಿ ಆರೋಗ್ಯ ವಿಮೆಯನ್ನು ಪ್ರತಿಯೊಬ್ಬರು ಹೊಂದಿರಬೇಕು . ಆರೋಗ್ಯ ಹಾಳಾಗಲಿ ಎಂದು ವಿಮೆ ಮಾಡಿಸುವುದಲ್ಲ, ಅಯಾಚಿತವಾಗಿ  ಆರೋಗ್ಯ ಹದಗೆಟ್ಟಾಗ ಊರುಗೋಲಾಗಿ ಆರೋಗ್ಯ ವಿಮೆ ನಮ್ಮ ಸಹಾಯಕ್ಕೆ ಅನೂಕೂಲವಾಗುತ್ತದೆ, ಉಜಿರೆಯಂತ ಗ್ರಾಮೀಣ ಪ್ರದೇಶದಲ್ಲಿ ಇಷ್ಟೊಂದು ಆರೋಗ್ಯ ಸೌಲಭ್ಯ ನೀಡುತ್ತಿರುವ  ಬೆನಕ ಹೆಲ್ತ್ ಸೆಂಟರ್ ನ ಕಾರ್ಯವೈಖರಿ ಶ್ಲಾಘನೀಯ . ಅತ್ಯಂತ ಸುಂದರವಾಗಿ  ಮತ್ತು ನವೀನ ಮಾದರಿಯಲ್ಲಿ ವಿಮಾ ವಿಭಾಗ ಸ್ಥಳಾಂತರಗೊಂಡಿದ್ದು , ಡಾ.ಗೋಪಾಲಕೃಷ್ಣ ಅವರ ಸೃಜನಶೀಲತೆ ಮತ್ತು ಉತ್ಸುಕತೆ ನಿಜಕ್ಕೂ ಪ್ರಶಂಶನೀಯವೆಂದು ಮೆಚ್ಚುಗೆಯ ನುಡಿಗಳನ್ನಾಡಿ ಶುಭ ಹಾರೈಸಿದರು .

ಡಾ.ಗೋಪಾಲಕೃಷ್ಣ ಮತ್ತು ಡಾ.ಭಾರತಿ ದಂಪತಿಗಳು , ಶರತ್ ಕೃಷ್ಣ  ಪಡವೆಟ್ನಾಯರನ್ನು ಶಾಲು ಹೊದಿಸಿ, ಹೂಗುಚ್ಛ ಮತ್ತು ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಹಿರಿಯರಾದ ಸೀತಾರಾಮ್  ಭಟ್ ಕೆ , ಡಾ.ಭಾರತಿ ಜಿ ಕೆ , ಡಾ.ಆದಿತ್ಯ ರಾವ್ , ಡಾ.ಅಂಕಿತ ಜಿ ಭಟ್ , ಡಾ.ರೋಹಿತ್ ಜಿ ಭಟ್ , ಡಾ.ನವ್ಯ ಭಟ್, ಡಾ.ಶ್ರೇಯಸ್ ಮತ್ತು ಬೆನಕ ಆಸ್ಪತ್ರೆಯ  ಸಿಬ್ಬಂದಿಗಳು ಉಪಸ್ಥಿತರಿದ್ದರು.      

Related posts

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸ್ವಯಂಸೇವಕರಾಗಿ ಭಾಗಿ

Suddi Udaya

ಕಲ್ಮಂಜ : ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಪಜಿರಡ್ಕ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವರಿಗೆ ಬೆಂಗಳೂರಿನ ನಾಗೇಂದ್ರ ಶಾಸ್ತ್ರೀರವರಿಂದ 108 ಲೀಟರ್ ಹಾಲಿನಿಂದ ಅಭಿಷೇಕ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಲ. ನಿತ್ಯಾನಂದ ನಾವರ ನೇಮಕ

Suddi Udaya

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!