23.6 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಕಾಲೇಜಿನಲ್ಲಿ ‘ ಇಕೋ-ವಿಷನ್ ‘ ಸಂಘ ಪದಗ್ರಹಣ ಸಮಾರಂಭ

ಉಜಿರೆ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ನಾನ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಿಕೊಟ್ಟಿದೆ. ಇದನ್ನು ಸಕ್ರೀಯವಾಗಿ ಬಳಸಿಕೊಂಡು ಭವಿಷ್ಯದ ಅವಕಾಶಗಳನ್ನು ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳು ಜವಾಬ್ದಾರಿಯುತ ಪ್ರಜೆಗಳಾದಗ ಸಶಕ್ತ ಮತ್ತು ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುತ್ತದೆ. ಶೈಕ್ಷಣಿಕ ಸಾಧನೆಯೊಂದಿಗೆ ಸಾಮಾಜಿಕ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಮಾದರಿಯಾಗುವ ವ್ಯಕ್ತಿತ್ವವನ್ನು ರೂಪಿಸಿಕೊಳ್ಳೋಣ ಎಂದು ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎ. ಜಯಕುಮಾರ್ ಶೆಟ್ಟಿ ಅಭಿಪ್ರಾಯಪಟ್ಟರು.

ಇವರು ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ ಅರ್ಥ ಶಾಸ್ತ್ರ ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗದ ವತಿಯಿಂದ ಆಯೋಜಿಸಿದ್ದ ಇಕೋ-ವಿಷನ್ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅರ್ಥ ಶಾಸ್ತ್ರ ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗದ ಮುಖ್ಯಸ್ಥ ಡಾ. ಗಣರಾಜ ಕೆ. ಪ್ರಾಸ್ತಾವಿಕ ಮಾತುಗಳನ್ನಾಡಿ ವಿಭಾಗದ ಶೈಕ್ಷಣಿಕ ಚಟುವಟಿಕೆಗಳ ಮಾಹಿತಿಯನ್ನು ಹಂಚಿಕೊಂಡರು. ಇಕೋ-ವಿಷನ್ ಸಂಘದ ವಿದ್ಯಾರ್ಥಿ ಸಂಚಾಲಕರಾಗಿ ತೃತೀಯ ಬಿ.ಎ. ವಿದ್ಯಾರ್ಥಿಗಳಾದ ನೆವಿಲ್ ಮತ್ತು ಕವನ ಸೇರಿದಂತೆ ಒಟ್ಟು 15 ವಿದ್ಯಾರ್ಥಿಗಳು ಪದಗ್ರಹಣ ಮಾಡಿದರು. ಬಳಿಕ ವಿದ್ಯಾರ್ಥಿಗಳು ರಚಿಸಿದ ಬಿತ್ತಿ ಪತ್ರಿಕೆಯ ಅನಾವರಣ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ವಿಭಾಗದ ಉಪನ್ಯಾಸಕರಾದ ಅಭಿನಂದನ್ ಜೈನ್ ಹಾಗೂ ನಾಗರಾಜ್ ಪೂಜಾರಿ ಸೇರಿದಂತೆ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಇಕೋ-ವಿಷನ್ ಸಂಘದ ಸಂಚಾಲಕ ಹಾಗೂ ಪ್ರಾಧ್ಯಾಪಕ ಡಾ. ಮಹೇಶ್ ಕುಮಾರ್ ಶೆಟ್ಟಿ ಎಚ್. ಕಾರ್ಯಕ್ರಮವನ್ನು ಸಂಯೋಜಿಸಿ ವಂದಿಸಿದರು.

Related posts

ಸುಲ್ಕೇರಿ ಗ್ರಾಮ ಸಭೆಗೆ ಒಂದು ಗಂಟೆ ಲೇಟಾಗಿ ಬಂದ ನೋಡೇಲ್ ಅಧಿಕಾರಿ, ಕಾದು ಕಾದು ಸುಸ್ತಾದ ಗ್ರಾಮಸ್ಥರು, ಅಧಿಕಾರಿ ವಿರುದ್ದ ಅಸಮಾಧಾನ, ನಿಗದಿತ ಸಮಯದಲ್ಲಿ ಸಭೆ ಪ್ರಾರಂಭವಾಗದೆ ವಿಳಂಬ

Suddi Udaya

ದಿಡುಪೆ: ಮನೆಯ ಹೊರ ಛಾವಣಿಯಿಂದ ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ

Suddi Udaya

ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದಿಂದ ಗುಣಮಟ್ಟ ಪರಿವೀಕ್ಷಣೆ

Suddi Udaya

ಸುಪ್ರೀಂ ಕೋರ್ಟ್ ನಲ್ಲಿ ರಿಜೆಕ್ಟ್ ಆಗಿತ್ತು ಬುರುಡೆ ಪ್ರಕರಣ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪೈಸಾ ಇನ್ಟ್ರೆಸ್ಟ್‌ ಲಿಟಿಗೇಷನ್‌ ಎಂದಿದ್ದ ನ್ಯಾಯಪೀಠ

Suddi Udaya

ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಸವಣಾಲುವಿನ ಹಿತ್ತಿಲಪೇಲ ನಿವಾಸಿಗಳು; ಸಂಪರ್ಕ ಕೊಂಡಿಯಾಗಿರುವ ನದಿಯನ್ನೇ ದಾಟದಂತೆ ಬ್ಯಾನರ್ ಹಾಕುವ ಮೂಲಕ ಅಧಿಕಾರಿಗಳ ದಿಗ್ಬಂಧನ

Suddi Udaya
error: Content is protected !!