ಬೆಳ್ತಂಗಡಿ : “ನಮ್ಮ ಆಹಾರ – ನಮ್ಮ ಹಕ್ಕು” ಕರಾವಳಿಯ ತಟ್ಟೆಗೆ ಕುಚ್ಚಲು ಬೇಕು ಎಂಬ ಘೋಷಣೆಯೊಂದಿಗೆ ಪಡಿತರ ಅಂಗಡಿಗಳ ಮೂಲಕ ಕುಚ್ಚಲು ಅಕ್ಕಿಯನ್ನು ವಿತರಿಸುವಂತೆ ಆಗ್ರಹಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಇಂದು ಬೆಳ್ತಂಗಡಿ ಕ್ಷೇತ್ರಾದ್ಯಂತ ಸಾಂಕೇತಿಕ ಪ್ರತಿಭಟನೆ ನಡೆಯಿತು.
ಬೆಳ್ತಂಗಡಿ, ಉಜಿರೆ, ಸುನ್ನತ್ ಕೆರೆ, ಪುಂಜಾಲಕಟ್ಟೆ ಹಾಗೂ ಕಲ್ಲೇರಿ ನ್ಯಾಯಬೆಲೆ ಅಂಗಡಿಗಳ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಊರಿನ ನಾಗರಿಕರು ಆಹಾರ ಪದ್ಧತಿಗೆ ಅನುಗುಣವಾಗಿ ಕುಚ್ಚಲು ಅಕ್ಕಿಯನ್ನು ಪಡಿತರ ವ್ಯವಸ್ಥೆಯ ಮೂಲಕ ವಿತರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ, ಬ್ಲಾಕ್ ಹಾಗೂ ಬ್ರಾಂಚ್ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.















