July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಮೀಲಾದ್ ಸ್ವಾಗತ ಸಮಿತಿ ರಚನೆ

ನಾವೂರು: ಮುಹಿಯುದ್ದೀನ್ ಜುಮಾ ಮಸೀದಿ, ಮುರ-ನಾವೂರಿನಲ್ಲಿ 2026ನೇ ಸಾಲಿನ ಮೀಲಾದ್ ಸ್ವಾಗತ ಸಮಿತಿಯನ್ನು ಜಮಾಅತ್ ಕಮಿಟಿಯ ಅಧ್ಯಕ್ಷ ಇಬ್ರಾಹಿಂ ಸಿ.ಎಂ. ಅವರ ಅಧ್ಯಕ್ಷತೆಯಲ್ಲಿ ರಚಿಸಲಾಯಿತು.

ಸಮಿತಿಯ ಅಧ್ಯಕ್ಷರಾಗಿ ಸುಲೇಮಾನ್ ಪಿ.ವೈ., ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಖಾದರ್ ನಾವೂರು, ಕೋಶಾಧಿಕಾರಿಯಾಗಿ ಶಹೀರ್ ನಾವೂರು ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ತಾಜುದ್ದೀನ್ ಕಿರ್ನಡ್ಕ ಹಾಗೂ ಇಬ್ರಾಹಿಂ ಪಿ.ಎ., ಜೊತೆ ಕಾರ್ಯದರ್ಶಿಗಳಾಗಿ ಈಸಾ ಕೇಳ್ತಾಜೆ ಮತ್ತು ಅಶ್ರಫ್ ಡಿ.ಎಂ. ಅವರನ್ನು ನೇಮಕ ಮಾಡಲಾಯಿತು. ಇವರನ್ನೊಳಗೊಂಡ ಒಟ್ಟು 26 ಸದಸ್ಯರ ಸ್ವಾಗತ ಸಮಿತಿಯನ್ನು ರಚಿಸಲಾಯಿತು.

ಸಭೆಯಲ್ಲಿ ಪ್ರಸಕ್ತ ಸಾಲಿನ ಮೀಲಾದ್ ಕಾರ್ಯಕ್ರಮ, ನಬಿದಿನ ರ್ಯಾಲಿ ಹಾಗೂ ಮದರಸ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವ ಕುರಿತು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಮುಹಿಯುದ್ದೀನ್ ಜುಮಾ ಮಸೀದಿಯ ಖತೀಬರಾದ ಬಹು. ಬಶೀರ್ ಸಅದಿ ಕೆಮ್ಮಾರ ಅವರು ದುಆ ಹಾಗೂ ಆಶೀರ್ವಚನ ನೀಡಿದರು.

ಮುಹಿಯುದ್ದೀನ್ ಜುಮಾ ಮಸೀದಿ ಮುರ-ನಾವೂರಿನ ಪ್ರಧಾನ ಕಾರ್ಯದರ್ಶಿ ಜಲೀಲ್ ಪಡಂಬಿಲ ಸ್ವಾಗತಿಸಿ, ಕಾರ್ಯದರ್ಶಿ ಖಾದರ್ ನಾವೂರು ವಂದಿಸಿದರು.

Related posts

ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಧರ್ಮಸ್ಥಳ ವ್ಯಾಪ್ತಿಯಲ್ಲಿ ಮೂರು ಬೈಕ್ ಮತ್ತು ಒಂದು ಕಾರು ಕಳ್ಳತನ ಪ್ರಕರಣ: ಇಬ್ಬರು ಅಪ್ರಾಪ್ತ ಬಾಲಕರು ಸೇರಿ ಐದು ಜನ ಆರೋಪಿಗಳ ಬಂಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26 ನೇ ಸಾಲಿನ ದಾಖಲಾತಿ ಆರಂಭ

Suddi Udaya

ಉರುವಾಲು: ಕಾರಿಂಜ ಬಾಯ್ತಾರು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯ ಸಮವಸ್ತ್ರ ವಿತರಣೆ

Suddi Udaya

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya
error: Content is protected !!