ಬೆಳ್ತಂಗಡಿ ವಕೀಲರ ಸಂಘಕ್ಕೆ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ನೂತನ ಸದಸ್ಯರಾಗಿ ಆಯ್ಕೆಯಾದ ನಾರಾಯಣ ಸ್ವಾಮಿ ಭೇಟಿ ನೀಡಿದರು. ಈ ವೇಳೆ ಬೆಳ್ತಂಗಡಿ ವಕೀಲರ ಸಂಘದಿಂದ ನಾರಾಯಣಸ್ವಾಮಿ ಇವರನ್ನು ಅಭಿನಂದಿಸಿ ಗೌರವಿಸಲಾಯಿತು.
ನಂತರ ಮಾತನಾಡಿದ ನಾರಾಯಣ ಸ್ವಾಮಿ ರವರು ರಾಜ್ಯದಲ್ಲಿ ಇರುವ ಯುವ ವಕೀಲರ ಕುಂದುಕೊರತೆಗಳನ್ನು ಸರಿಪಡಿಸಲು ನಾನು ಶ್ರಮಿಸುದಾಗಿ ಹೇಳಿದರು. ನಾನು ಎಲ್ಲಾ ಯುವ ವಕೀಲರ ಪ್ರತಿನಿಧಿಯಾಗಿ ಧ್ವನಿ ಆಗಲಿದ್ದೇನೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ವಕೀಲರ ಸಂಘದ ಅಧ್ಯಕ್ಷ ಅಲೋಸಿಯಸ್ ಎಸ್ ಲೋಬೊ ಅಭಿನಂದಿಸಿ ವಕೀಲರ ಕುಂದು ಕೊರತೆಗಳಿಗೆ ಧ್ವನಿಯಾಗಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಅಪರ ಸರ್ಕಾರಿ ವಕೀಲರಾದ ಮನೋಹರ್ ಕುಮಾರ್ ಎ ಸ್ವಾಗತಿಸಿ, ಜೊತೆ ಕಾರ್ಯದರ್ಶಿಯಾದ ಹರ್ಷಿತ್ ಕುಮಾರ್ ಹೆಚ್ ಧನ್ಯವಾದ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ವಕೀಲ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ, ಹಿರಿಯ ಸಮಿತಿಯ ಅಧ್ಯಕ್ಷ ಶಿವ ಕುಮಾರ್ ಎಸ್ ಎಂ, ನಿಕಟಪೂರ್ವ ಕಾರ್ಯದರ್ಶಿ ನವೀನ್ ಬಿ ಕೆ, ಹಿರಿಯ ಕಿರಿಯ ವಕೀಲರಾದ ಅಜಿತ್ ಎನ್, ಶಾಮ ಭಟ್, ಶಿವಯ್ಯ ಎಸ್ ಎಲ್, ಪದಾಧಿಕಾರಿಗಳು ಹಾಗೂ ಯುವ ವಕೀಲರುಗಳು ಹಾಜರಿದ್ದರು.















