July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘಕ್ಕೆ ರಾಜ್ಯ ವಕೀಲರ ಪರಿಷತ್ತಿನ ನೂತನ ಸದಸ್ಯರಾಗಿ ಆಯ್ಕೆಯಾದ ನಾರಾಯಣ ಸ್ವಾಮಿ ಭೇಟಿ

ಬೆಳ್ತಂಗಡಿ ವಕೀಲರ ಸಂಘಕ್ಕೆ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ನೂತನ ಸದಸ್ಯರಾಗಿ ಆಯ್ಕೆಯಾದ ನಾರಾಯಣ ಸ್ವಾಮಿ ಭೇಟಿ ನೀಡಿದರು. ಈ ವೇಳೆ ಬೆಳ್ತಂಗಡಿ ವಕೀಲರ ಸಂಘದಿಂದ ನಾರಾಯಣಸ್ವಾಮಿ ಇವರನ್ನು ಅಭಿನಂದಿಸಿ ಗೌರವಿಸಲಾಯಿತು.

ನಂತರ ಮಾತನಾಡಿದ ನಾರಾಯಣ ಸ್ವಾಮಿ ರವರು ರಾಜ್ಯದಲ್ಲಿ ಇರುವ ಯುವ ವಕೀಲರ ಕುಂದುಕೊರತೆಗಳನ್ನು ಸರಿಪಡಿಸಲು ನಾನು ಶ್ರಮಿಸುದಾಗಿ ಹೇಳಿದರು. ನಾನು ಎಲ್ಲಾ ಯುವ ವಕೀಲರ ಪ್ರತಿನಿಧಿಯಾಗಿ ಧ್ವನಿ ಆಗಲಿದ್ದೇನೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.


ವಕೀಲರ ಸಂಘದ ಅಧ್ಯಕ್ಷ ಅಲೋಸಿಯಸ್ ಎಸ್ ಲೋಬೊ ಅಭಿನಂದಿಸಿ ವಕೀಲರ ಕುಂದು ಕೊರತೆಗಳಿಗೆ ಧ್ವನಿಯಾಗಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಅಪರ ಸರ್ಕಾರಿ ವಕೀಲರಾದ ಮನೋಹರ್ ಕುಮಾರ್ ಎ ಸ್ವಾಗತಿಸಿ, ಜೊತೆ ಕಾರ್ಯದರ್ಶಿಯಾದ ಹರ್ಷಿತ್ ಕುಮಾರ್ ಹೆಚ್ ಧನ್ಯವಾದ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಕೀಲ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ, ಹಿರಿಯ ಸಮಿತಿಯ ಅಧ್ಯಕ್ಷ ಶಿವ ಕುಮಾರ್ ಎಸ್ ಎಂ, ನಿಕಟಪೂರ್ವ ಕಾರ್ಯದರ್ಶಿ ನವೀನ್ ಬಿ ಕೆ, ಹಿರಿಯ ಕಿರಿಯ ವಕೀಲರಾದ ಅಜಿತ್ ಎನ್, ಶಾಮ ಭಟ್, ಶಿವಯ್ಯ ಎಸ್ ಎಲ್, ಪದಾಧಿಕಾರಿಗಳು ಹಾಗೂ ಯುವ ವಕೀಲರುಗಳು ಹಾಜರಿದ್ದರು.

Related posts

ಆರೋಗ್ಯ ರಕ್ಷಕರಿಗೆ ರಕ್ಷೆ ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾಬಂಧನ ಆಚರಿಸಿದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು

Suddi Udaya

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಮಾಲಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

Suddi Udaya

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಕೇರಳ ಸಂಸದನಿಗೆ ಸಂಕಷ್ಟ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಮತ್ತು ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಸಿಪಿ ಆರ್ ಮಾಹಿತಿ ಮತ್ತು ತರಬೇತಿ ಕಾರ‍್ಯಕ್ರಮ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya
error: Content is protected !!