25.2 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಸೌತಡ್ಕ ಅಂಗನವಾಡಿಯಲ್ಲಿ ಆಟಿಕೆಗಳ ಮಧ್ಯೆ ಅಡಗಿದ್ದ ಹಾವು ಕಚ್ಚಿ 4 ವರ್ಷದ ಬಾಲಕಿ ಆಸ್ಪತ್ರೆಗೆ ದಾಖಲು

ಕೊಕ್ಕಡ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿದ ಆತಂಕಕಾರಿ ಘಟನೆ ಜು.14 ರಂದು ನಡೆದಿದೆ. ಹಾವು ಕಚ್ಚಿದ ಪರಿಣಾಮ ಅಸ್ವಸ್ಥಗೊಂಡ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಹಾವು ಕಚ್ಚಿದ ಬಾಲಕಿಯನ್ನು ಮಲ್ಲಿಗೆಮಜಲು ಮಸೀದಿಯ ಅಧ್ಯಕ್ಷ ಸಿಯಾಬ್ ಅವರ ಪುತ್ರಿ ಪಾತಿಮತ್ ಸಹದಿಯಾ(4) ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ ಪಾತಿಮತ್ ಸಹದಿಯಾ ಎಂದಿನಂತೆ ಅಂಗನವಾಡಿಗೆ ತೆರಳಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದಳು. ಈ ವೇಳೆ ತರಗತಿ ಕೊಠಡಿಯೊಳಗೆ ಮಕ್ಕಳ ಆಟಿಕೆಗಳ ನಡುವೆ ಅಡಗಿದ್ದ ಹಾವು ಬಾಲಕಿಗೆ ಕಚ್ಚಿದೆ ಎನ್ನಲಾಗಿದೆ. ಹಾವು ಕಚ್ಚಿದ ತಕ್ಷಣ ಬಾಲಕಿ ಜೋರಾಗಿ ಅಳಲು ಆರಂಭಿಸಿದ್ದು, ಇದನ್ನು ಗಮನಿಸಿದ ಅಂಗನವಾಡಿ ಸಹಾಯಕಿ ಕೂಡಲೇ ಬಾಲಕಿಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಘಟನೆ ನಡೆದ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ಬಿ.ಎಲ್.ಓ. ಕರ್ತವ್ಯದ ನಿಮಿತ್ತ ಹೊರಗಡೆ ತೆರಳಿದ್ದರಿಂದ ಕೇಂದ್ರದಲ್ಲಿ ಸಹಾಯಕಿ ಮಾತ್ರ ಕರ್ತವ್ಯದಲ್ಲಿದ್ದರು ಎಂದು ತಿಳಿದುಬಂದಿದೆ.

ಬಾಲಕಿಯನ್ನು ತಕ್ಷಣ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಯಿತು. ಬಳಿಕ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿಂದ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ರವಾನಿಸಿದ್ದು, ಅಲ್ಲಿ ತುರ್ತು ನಿಗಾ ಘಟಕದಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸತತ 2ನೇ ಬಾರಿಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಮಾನ್ಯತಾ ಪ್ರಮಾಣಪತ್ರ

Suddi Udaya

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

Suddi Udaya

ಹೊಸಂಗಡಿ ಗ್ರಾ. ಪಂ. ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Suddi Udaya
error: Content is protected !!