27.1 C
ಪುತ್ತೂರು, ಬೆಳ್ತಂಗಡಿ
July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ನವೀಕೃತಗೊಂಡ ಆರೋಗ್ಯ ವಿಮಾ ಯೋಜನೆಯ ವಿಭಾಗ ಲೋಕಾರ್ಪಣೆ     

ಉಜಿರೆ : NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ  ವಿನೂತನ ಮಾದರಿಯ ನವೀಕೃತಗೊಂಡ  ಆರೋಗ್ಯ ವಿಮಾ ಯೋಜನೆಗೆ ಸಂಬಂಧಿಸಿಂದ ವಿಭಾಗವನ್ನು ಜನಾರ್ಧನ ಸ್ವಾಮಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ   ಶರತ್ ಕೃಷ್ಣ ಪಡವೆಟ್ನಾಯ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು .

ಈ ಸಂದರ್ಭದಲ್ಲಿ  ಮಾತನಾಡುತ್ತ ಇತ್ತೀಚಿನ ದಿನಗಳಲ್ಲಿ ಆರೋಗ್ಯ ವಿಮೆಯನ್ನು ಪ್ರತಿಯೊಬ್ಬರು ಹೊಂದಿರಬೇಕು . ಆರೋಗ್ಯ ಹಾಳಾಗಲಿ ಎಂದು ವಿಮೆ ಮಾಡಿಸುವುದಲ್ಲ, ಅಯಾಚಿತವಾಗಿ  ಆರೋಗ್ಯ ಹದಗೆಟ್ಟಾಗ ಊರುಗೋಲಾಗಿ ಆರೋಗ್ಯ ವಿಮೆ ನಮ್ಮ ಸಹಾಯಕ್ಕೆ ಅನೂಕೂಲವಾಗುತ್ತದೆ, ಉಜಿರೆಯಂತ ಗ್ರಾಮೀಣ ಪ್ರದೇಶದಲ್ಲಿ ಇಷ್ಟೊಂದು ಆರೋಗ್ಯ ಸೌಲಭ್ಯ ನೀಡುತ್ತಿರುವ  ಬೆನಕ ಹೆಲ್ತ್ ಸೆಂಟರ್ ನ ಕಾರ್ಯವೈಖರಿ ಶ್ಲಾಘನೀಯ . ಅತ್ಯಂತ ಸುಂದರವಾಗಿ  ಮತ್ತು ನವೀನ ಮಾದರಿಯಲ್ಲಿ ವಿಮಾ ವಿಭಾಗ ಸ್ಥಳಾಂತರಗೊಂಡಿದ್ದು , ಡಾ.ಗೋಪಾಲಕೃಷ್ಣ ಅವರ ಸೃಜನಶೀಲತೆ ಮತ್ತು ಉತ್ಸುಕತೆ ನಿಜಕ್ಕೂ ಪ್ರಶಂಶನೀಯವೆಂದು ಮೆಚ್ಚುಗೆಯ ನುಡಿಗಳನ್ನಾಡಿ ಶುಭ ಹಾರೈಸಿದರು .

ಡಾ.ಗೋಪಾಲಕೃಷ್ಣ ಮತ್ತು ಡಾ.ಭಾರತಿ ದಂಪತಿಗಳು , ಶರತ್ ಕೃಷ್ಣ  ಪಡವೆಟ್ನಾಯರನ್ನು ಶಾಲು ಹೊದಿಸಿ, ಹೂಗುಚ್ಛ ಮತ್ತು ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಹಿರಿಯರಾದ ಸೀತಾರಾಮ್  ಭಟ್ ಕೆ , ಡಾ.ಭಾರತಿ ಜಿ ಕೆ , ಡಾ.ಆದಿತ್ಯ ರಾವ್ , ಡಾ.ಅಂಕಿತ ಜಿ ಭಟ್ , ಡಾ.ರೋಹಿತ್ ಜಿ ಭಟ್ , ಡಾ.ನವ್ಯ ಭಟ್, ಡಾ.ಶ್ರೇಯಸ್ ಮತ್ತು ಬೆನಕ ಆಸ್ಪತ್ರೆಯ  ಸಿಬ್ಬಂದಿಗಳು ಉಪಸ್ಥಿತರಿದ್ದರು.      

Related posts

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಸಿಸಿ ಕೆಮರಾ ಅಳವಡಿಸುವಿಕೆ ಮತ್ತು ಜೇನು ಸಾಕಾಣಿಕೆ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya

ಶಿಶಿಲ: ಪಡ್ಪು ನಿವಾಸಿ ಧರ್ಣಪ್ಪ ಗೌಡ ನಿಧನ

Suddi Udaya
error: Content is protected !!