July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ನೂತನ ರೂಪದಲ್ಲಿ ಶುಭಾರಂಭಗೊಂಡ ‘ಶ್ರೀರಾಮ್ ತರಕಾರಿ & ಫ್ರೂಟ್ಸ್’

ಬೆಳ್ತಂಗಡಿ: ಉಜಿರೆ ಮಾರಿಗುಡಿ ದ್ವಾರದ ಮುಂಭಾಗದಲ್ಲಿರುವ ‘ಶ್ರೀರಾಮ್ ತರಕಾರಿ & ಫ್ರೂಟ್ಸ್’ ಮಳಿಗೆಯು ಸಂಪೂರ್ಣ ನವೀಕೃತಗೊಂಡು ಹೊಸ ರೂಪದಲ್ಲಿ ಜು.15ರಂದು ಶುಭಾರಂಭಗೊಂಡಿತು.

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ಮಳಿಗೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ ಕೆ. ಮೋಹನ್ ಕುಮಾರ್ , ಉಜಿರೆ ಮಾಧವ ಪಡ್ವೆಟ್ನಾಯ, ಉದಯ ಚಿಕನ್ ಮಾಲೀಕ ರಾಮಚಂದ್ರ ಶೆಟ್ಟಿ, ಶ್ರೀಪತಿ ಪಡ್ವೆಟ್ನಾಯ, ಶ್ರೀಶ ಪಡ್ವೆಟ್ನಾಯ ಹಾಗೂ ರಾಜಾರಾಮ್ ದಂಪತಿ ಉಪಸ್ಥಿತರಿದ್ದು ನೂತನ ಸಂಸ್ಥೆಗೆ ಶುಭಕೋರಿದರು.

ಕಾರ್ಯಕ್ತಮದಲ್ಕಿ ಜಯಪ್ರಕಾಶ್ ಶೆಟ್ಟಿ, ಗಣೇಶ್ ಕಕ್ಕಿಂಜೆ, ಪ್ರಶಾಂತ್ ಜೈನ್ ಅಮೃತ್, ಪ್ರಭಾಕರ ಜೈನ್ ಮಹಾವೀರ, ಹುಕುಂರಾಮ್ ಪಟೇಲ್, ಪುರುಷೋತ್ತಮ ಆಚಾರ್ಯ ಸೋಮಂತಡ್ಕ, ಜಯಂತ್ ನಮನ, ಆನಂದ್ ಪೂಜಾರಿ ಸೇರಿದಂತೆ ಉಜಿರೆಯ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶುಭ ಹಾರೈಸಿದರು.

ಉಜಿರೆ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ಬಿ.ಎಸ್. ಸ್ವಾಗತಿಸಿದರು. ಬೆಳ್ತಂಗಡಿಯ ಪ್ರತೀಕ್ಷಾ ಫ್ಯಾನ್ಸಿ ಸಂಸ್ಥೆಯ ಮಾಲೀಕ ಚಿದಾನಂದ ಇಡ್ಯ ಕಾರ್ಯಕ್ರಮ ನಿರೂಪಿಸಿದರು. ಶ್ರೀರಾಮ್ ತರಕಾರಿ & ಫ್ರೂಟ್ಸ್ ಮಾಲೀಕರಾದ ವಿಜಯ್ ಕುಮಾರ್ – ಸುಮಾ ಕಕುಂದರ್, ಪುತ್ರರಾದ ಹಿಮಾನ್ಶ್ ಮತ್ತು ದ್ರುತವ್ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಪಾಲಡ್ಕ-ಕುದ್ರಡ್ಕ ಒಕ್ಕೂಟದ ವತಿಯಿಂದ ಶಾಲಾ ಮಕ್ಕಳಿಗೆ ಹಣ್ಣುಹಂಪಲು ವಿತರಣೆ

Suddi Udaya

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya

ಕುತ್ಲೂರು : ಬಿಜೆಪಿಯಿಂದ ಮನೆ‌ ಮನೆ ಭೇಟಿ ಕಾರ್ಯಕ್ರಮ

Suddi Udaya

ಬಳಂಜ ಶಾಲೆಗೆ ಹಳೆವಿದ್ಯಾರ್ಥಿಗಳಿಂದ ಎರಡು ಟಿವಿ ಕೊಡುಗೆ

Suddi Udaya

ಲಯನ್ಸ್ ಜಿಲ್ಲಾ ಪ್ರಶಸ್ತಿ ಪ್ರಧಾನ ಸಮಾರಂಭ ಧನ್ಯೋಸ್ಮಿ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೆಡ್ ಕಟ್ಟಡದಲ್ಲಿ “ಹೊಟೇಲ್ ಸಮಡೈನ್” ಉದ್ಘಾಟನೆ

Suddi Udaya
error: Content is protected !!