23.6 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಮೀಲಾದ್ ಸ್ವಾಗತ ಸಮಿತಿ ರಚನೆ

ನಾವೂರು: ಮುಹಿಯುದ್ದೀನ್ ಜುಮಾ ಮಸೀದಿ, ಮುರ-ನಾವೂರಿನಲ್ಲಿ 2026ನೇ ಸಾಲಿನ ಮೀಲಾದ್ ಸ್ವಾಗತ ಸಮಿತಿಯನ್ನು ಜಮಾಅತ್ ಕಮಿಟಿಯ ಅಧ್ಯಕ್ಷ ಇಬ್ರಾಹಿಂ ಸಿ.ಎಂ. ಅವರ ಅಧ್ಯಕ್ಷತೆಯಲ್ಲಿ ರಚಿಸಲಾಯಿತು.

ಸಮಿತಿಯ ಅಧ್ಯಕ್ಷರಾಗಿ ಸುಲೇಮಾನ್ ಪಿ.ವೈ., ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಖಾದರ್ ನಾವೂರು, ಕೋಶಾಧಿಕಾರಿಯಾಗಿ ಶಹೀರ್ ನಾವೂರು ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ತಾಜುದ್ದೀನ್ ಕಿರ್ನಡ್ಕ ಹಾಗೂ ಇಬ್ರಾಹಿಂ ಪಿ.ಎ., ಜೊತೆ ಕಾರ್ಯದರ್ಶಿಗಳಾಗಿ ಈಸಾ ಕೇಳ್ತಾಜೆ ಮತ್ತು ಅಶ್ರಫ್ ಡಿ.ಎಂ. ಅವರನ್ನು ನೇಮಕ ಮಾಡಲಾಯಿತು. ಇವರನ್ನೊಳಗೊಂಡ ಒಟ್ಟು 26 ಸದಸ್ಯರ ಸ್ವಾಗತ ಸಮಿತಿಯನ್ನು ರಚಿಸಲಾಯಿತು.

ಸಭೆಯಲ್ಲಿ ಪ್ರಸಕ್ತ ಸಾಲಿನ ಮೀಲಾದ್ ಕಾರ್ಯಕ್ರಮ, ನಬಿದಿನ ರ್ಯಾಲಿ ಹಾಗೂ ಮದರಸ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವ ಕುರಿತು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಮುಹಿಯುದ್ದೀನ್ ಜುಮಾ ಮಸೀದಿಯ ಖತೀಬರಾದ ಬಹು. ಬಶೀರ್ ಸಅದಿ ಕೆಮ್ಮಾರ ಅವರು ದುಆ ಹಾಗೂ ಆಶೀರ್ವಚನ ನೀಡಿದರು.

ಮುಹಿಯುದ್ದೀನ್ ಜುಮಾ ಮಸೀದಿ ಮುರ-ನಾವೂರಿನ ಪ್ರಧಾನ ಕಾರ್ಯದರ್ಶಿ ಜಲೀಲ್ ಪಡಂಬಿಲ ಸ್ವಾಗತಿಸಿ, ಕಾರ್ಯದರ್ಶಿ ಖಾದರ್ ನಾವೂರು ವಂದಿಸಿದರು.

Related posts

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯ ಅವರಿಗೆ ಬೀಳ್ಕೊಡುಗೆ ಸಮಾರಂಭ: ಶಾಲೆಯ ಪ್ರಗತಿಗೆ ಶಿಕ್ಷಕಿ ವಿಜಯರವರ ಕೊಡುಗೆ ಅಪಾರ: ಮೋಹನ್ ಕುಮಾರ್

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

Suddi Udaya

ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!