July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಮೀಲಾದ್ ಸ್ವಾಗತ ಸಮಿತಿ ರಚನೆ

ನಾವೂರು: ಮುಹಿಯುದ್ದೀನ್ ಜುಮಾ ಮಸೀದಿ, ಮುರ-ನಾವೂರಿನಲ್ಲಿ 2026ನೇ ಸಾಲಿನ ಮೀಲಾದ್ ಸ್ವಾಗತ ಸಮಿತಿಯನ್ನು ಜಮಾಅತ್ ಕಮಿಟಿಯ ಅಧ್ಯಕ್ಷ ಇಬ್ರಾಹಿಂ ಸಿ.ಎಂ. ಅವರ ಅಧ್ಯಕ್ಷತೆಯಲ್ಲಿ ರಚಿಸಲಾಯಿತು.

ಸಮಿತಿಯ ಅಧ್ಯಕ್ಷರಾಗಿ ಸುಲೇಮಾನ್ ಪಿ.ವೈ., ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಖಾದರ್ ನಾವೂರು, ಕೋಶಾಧಿಕಾರಿಯಾಗಿ ಶಹೀರ್ ನಾವೂರು ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ತಾಜುದ್ದೀನ್ ಕಿರ್ನಡ್ಕ ಹಾಗೂ ಇಬ್ರಾಹಿಂ ಪಿ.ಎ., ಜೊತೆ ಕಾರ್ಯದರ್ಶಿಗಳಾಗಿ ಈಸಾ ಕೇಳ್ತಾಜೆ ಮತ್ತು ಅಶ್ರಫ್ ಡಿ.ಎಂ. ಅವರನ್ನು ನೇಮಕ ಮಾಡಲಾಯಿತು. ಇವರನ್ನೊಳಗೊಂಡ ಒಟ್ಟು 26 ಸದಸ್ಯರ ಸ್ವಾಗತ ಸಮಿತಿಯನ್ನು ರಚಿಸಲಾಯಿತು.

ಸಭೆಯಲ್ಲಿ ಪ್ರಸಕ್ತ ಸಾಲಿನ ಮೀಲಾದ್ ಕಾರ್ಯಕ್ರಮ, ನಬಿದಿನ ರ್ಯಾಲಿ ಹಾಗೂ ಮದರಸ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವ ಕುರಿತು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಮುಹಿಯುದ್ದೀನ್ ಜುಮಾ ಮಸೀದಿಯ ಖತೀಬರಾದ ಬಹು. ಬಶೀರ್ ಸಅದಿ ಕೆಮ್ಮಾರ ಅವರು ದುಆ ಹಾಗೂ ಆಶೀರ್ವಚನ ನೀಡಿದರು.

ಮುಹಿಯುದ್ದೀನ್ ಜುಮಾ ಮಸೀದಿ ಮುರ-ನಾವೂರಿನ ಪ್ರಧಾನ ಕಾರ್ಯದರ್ಶಿ ಜಲೀಲ್ ಪಡಂಬಿಲ ಸ್ವಾಗತಿಸಿ, ಕಾರ್ಯದರ್ಶಿ ಖಾದರ್ ನಾವೂರು ವಂದಿಸಿದರು.

Related posts

ನ.16-17: ಎಕ್ಸೆಲ್ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ, ಸಾಂಸ್ಕೃತಿಕ ವೈವಿಧ್ಯ

Suddi Udaya

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ನೂತನ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

Suddi Udaya

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!