23.6 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘಕ್ಕೆ ರಾಜ್ಯ ವಕೀಲರ ಪರಿಷತ್ತಿನ ನೂತನ ಸದಸ್ಯರಾಗಿ ಆಯ್ಕೆಯಾದ ನಾರಾಯಣ ಸ್ವಾಮಿ ಭೇಟಿ

ಬೆಳ್ತಂಗಡಿ ವಕೀಲರ ಸಂಘಕ್ಕೆ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ನೂತನ ಸದಸ್ಯರಾಗಿ ಆಯ್ಕೆಯಾದ ನಾರಾಯಣ ಸ್ವಾಮಿ ಭೇಟಿ ನೀಡಿದರು. ಈ ವೇಳೆ ಬೆಳ್ತಂಗಡಿ ವಕೀಲರ ಸಂಘದಿಂದ ನಾರಾಯಣಸ್ವಾಮಿ ಇವರನ್ನು ಅಭಿನಂದಿಸಿ ಗೌರವಿಸಲಾಯಿತು.

ನಂತರ ಮಾತನಾಡಿದ ನಾರಾಯಣ ಸ್ವಾಮಿ ರವರು ರಾಜ್ಯದಲ್ಲಿ ಇರುವ ಯುವ ವಕೀಲರ ಕುಂದುಕೊರತೆಗಳನ್ನು ಸರಿಪಡಿಸಲು ನಾನು ಶ್ರಮಿಸುದಾಗಿ ಹೇಳಿದರು. ನಾನು ಎಲ್ಲಾ ಯುವ ವಕೀಲರ ಪ್ರತಿನಿಧಿಯಾಗಿ ಧ್ವನಿ ಆಗಲಿದ್ದೇನೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.


ವಕೀಲರ ಸಂಘದ ಅಧ್ಯಕ್ಷ ಅಲೋಸಿಯಸ್ ಎಸ್ ಲೋಬೊ ಅಭಿನಂದಿಸಿ ವಕೀಲರ ಕುಂದು ಕೊರತೆಗಳಿಗೆ ಧ್ವನಿಯಾಗಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಅಪರ ಸರ್ಕಾರಿ ವಕೀಲರಾದ ಮನೋಹರ್ ಕುಮಾರ್ ಎ ಸ್ವಾಗತಿಸಿ, ಜೊತೆ ಕಾರ್ಯದರ್ಶಿಯಾದ ಹರ್ಷಿತ್ ಕುಮಾರ್ ಹೆಚ್ ಧನ್ಯವಾದ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಕೀಲ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ, ಹಿರಿಯ ಸಮಿತಿಯ ಅಧ್ಯಕ್ಷ ಶಿವ ಕುಮಾರ್ ಎಸ್ ಎಂ, ನಿಕಟಪೂರ್ವ ಕಾರ್ಯದರ್ಶಿ ನವೀನ್ ಬಿ ಕೆ, ಹಿರಿಯ ಕಿರಿಯ ವಕೀಲರಾದ ಅಜಿತ್ ಎನ್, ಶಾಮ ಭಟ್, ಶಿವಯ್ಯ ಎಸ್ ಎಲ್, ಪದಾಧಿಕಾರಿಗಳು ಹಾಗೂ ಯುವ ವಕೀಲರುಗಳು ಹಾಜರಿದ್ದರು.

Related posts

ಜಿಲ್ಲಾಧಿಕಾರಿ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮಲೆಕುಡಿಯ ಸಮುದಾಯದ ಮುಖಂಡರ ಒತ್ತಾಯ

Suddi Udaya

ಧರ್ಮಸ್ಥಳ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಂ ವತಿಯಿಂದ ಗುರು ಜಯಂತಿ ಆಚರಣೆ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದಿಂದ ಮನೆ ದುರಸ್ತಿ ಕಾರ್ಯ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ.ಶಿಕ್ಷಕ ರಕ್ಷಕ ಸಂಘದ ಪೋಷಕರ ಸಭೆ .

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ತೆoಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!