July 16, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಬೆಳ್ತಂಗಡಿ: ತಾಲೂಕಿನಲ್ಲಿ ಎರಡು ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ತಣ್ಣೀರುಪಂತದ ಕೊಡಂಗೆ ಮತ್ತು ತೆಕ್ಕಾರಿನ ಬಾಜಾರು ಅಂಗನವಾಡಿ ಕಾರ್ಯಕರ್ತೆ ಹುದ್ದೆ ಹಾಗೂ ಬಾರ್ಯದ ಪೆರಿಯೊಟ್ಟು, ಕೊಕ್ಕಡದ ಹಳ್ಳಿಂಗೇರಿ, ಉಜಿರೆಯ ಅತ್ತಾಜೆ, ಕೊಯ್ಯೂರಿನ ಬಜಿಲ, ಮಲವಂತಿಗೆಯ ಎಳನೀರು ಮತ್ತು ಗುತ್ಯಡ್ಕ, ನೆರಿಯದ ಬಾಂಜಾರುಮಲೆ, ಬೆಳಾಲಿನ ಕೊಲ್ಪಾಡಿ, ಕೊಯ್ಯೂರಿನ ಪೆರ್ಮುದೆ ಕೊಪ್ಪದಬೈಲ್, ಚಿಬಿದ್ರೆಯ ಕಲ್ಲಗುಂಡ, ಇಂದಬೆಟ್ಟಿನ ಇಂದಬೆಟ್ಟು, ಕೊಕ್ಕಡದ ಸೌತಡ್ಕ, ಬೆಳಾಲಿನ ದೊಂಪದಪಲ್ಕೆ ಬಿ ಇಲ್ಲಿ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ನೆರಿಯ ಬಾಂಜಾರುಮಲೆ ಪ.ಪಂಕ್ಕೆ ಮೀಸಲಾಗಿದ್ದು, ಉಳಿದ ಎಲ್ಲಾ ಹುದ್ದೆಗಳು ಸಾಮಾನ್ಯರಿಗೆ ನೀಡಲಾಗಿದೆ.

ಅಂಗನವಾಡಿ ಕಾರ್ಯಕರ್ತೆಗೆ ಪಿಯುಸಿ, ಸಹಾಯಕಿ ಎಸ್ಸೆಸ್ಸೆಲ್ಸಿ ಪಾಸಾಗಿರಬೇಕು. ವಯಸ್ಸು 19ರಿಂದ 35 ವರ್ಷ, ಅರ್ಜಿ ಸಲ್ಲಿಸಲು ಆ.10 ಕೊನೆಯ ದಿನವಾಗಿದೆ. ಅರ್ಜಿ ಫಾರಂಗಳನ್ನು ಶಿಶುಅಭಿವೃದ್ಧಿ ಯೋಜನಾ ಕಚೇರಿಯಿಂದ ಪಡೆದು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯನ್ನು ೦೮೨೫೬-೨೯೫೧೩೪ನ್ನು ಸಂಪರ್ಕಿಸಬಹುದು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ಉಜಿರೆ “ಕನಸಿನ ಮನೆ” ಕೆ. ಮೋಹನ್ ಕುಮಾರ್‌ರ ವಿಭಿನ್ನ ಕಲ್ಪನೆಯಲ್ಲಿ ತಲೆಎತ್ತಿ ನಿಂತಿದೆ-ಬ್ರಹ್ಮಕಲಶೋತ್ಸವದಲ್ಲಿ ಮನಸೆಳೆಯುತ್ತಿರುವ “ಸುಪ್ರಸಾದ” ಭೋಜನಾಲಯ

Suddi Udaya

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ತಾಲೂಕು ದಸರಾ ಕ್ರೀಡಾಕೂಟ: ಭಾರತ ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ: ಡಾ. ಸತೀಶ್ಚಂದ್ರ

Suddi Udaya

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya
error: Content is protected !!