26.5 C
ಪುತ್ತೂರು, ಬೆಳ್ತಂಗಡಿ
July 16, 2026
Uncategorized

ಅಳದಂಗಡಿಯ ಶ್ರೀರಂಗ ಮಯ್ಯರಿಗೆ ಜಿಲ್ಲಾ ಮಟ್ಟದ ಸೇವಾ ಭೂಷಣ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ಪುತ್ತೂರು ಮತ್ತು ಕಡಬ ತಾಲೂಕು ಘಟಕದ ವತಿಯಿಂದ ಪುತ್ತೂರಿನ ಬಂಟರ ಭವನದಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ ನೌಕರರ ಜಿಲ್ಲಾ ಶೈಕ್ಷಣಿಕ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತನ್ನ ದಕ್ಷ ಹಾಗೂ ಪ್ರಾಮಾಣಿಕ ಸೇವೆಗಾಗಿ ಜಿಲ್ಲಾ ಮಟ್ಟದ ಸೇವಾಭೂಷಣ ಪ್ರಶಸ್ತಿ ಪಡೆಯಬೇಕಿದ್ದ ಧರೆಗುಡ್ಡೆಯ ಸರಕಾರಿ ಪ್ರೌಢಶಾಲೆಯ ಪ್ರಥಮ ದರ್ಜೆ ಸಹಾಯಕ ಎ. ಶೀರಂಗ ಮಯ್ಯ ಅವರಿಗೆ ಮಂಗಳೂರಿನಲ್ಲಿ ಇತ್ತೀಚೆಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ನಾರಾಯಣ ಮಯ್ಯ ಮತ್ತು ಕೆ. ಸೀತಮ್ಮ ದಂಪತಿಯ ಪುತ್ರನಾಗಿ 1970ರ ಆಗಸ್ಟ್ 4ರಂದು ಅಳದಂಗಡಿಯಲ್ಲಿ ಜನಿಸಿದ ಶ್ರೀರಂಗ ಮಯ್ಯ ಅವರು ತಮ್ಮ ವಿದ್ಯಾಭ್ಯಾಸದ ಬಳಿಕ 1990ರ ಜುಲೈ 19ರಂದು ಪಂಜ ಸರಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ವೃತ್ತಿಗೆ ಸೇರಿದ್ದರು. 1995ರ ಜೂನ್ 4ರಿಂದ 2008ರ ಮಾರ್ಚ್ 4ರವರೆಗೆ ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು 2008ರ ಮಾರ್ಚ್ 5ರಿಂದ 2012ರ ಅಕ್ಟೋಬರ್ 2ರವರೆಗೆ ಪದ್ಮುಂಜ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿದ್ದ ಇವರು ಬಳಿಕ ಭಡ್ತಿ ಪಡೆದು 2012ರ ಅಕ್ಟೋಬರ್ 3ರಿಂದ ಧರೆಗುಡ್ಡೆ ಸರಕಾರಿ ಪ್ರೌಢಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇವರ ದಕ್ಷ ಮತ್ತು ಪ್ರಾಮಾಣಿಕ ಸೇವೆ ಗುರುತಿಸಿ ಜಿಲ್ಲಾ ಮಟ್ಟದ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಯು.ಟಿ. ಖಾದರ್ ಅವರಿಂದ ಶ್ರೀರಂಗ ಮಯ್ಯ ಅವರು ಪ್ರಶಸ್ತಿ ಸ್ವೀಕರಿಸಿದರು.

Related posts

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

Suddi Udaya

ಗುರುವಾಯನಕೆರೆ ಶ್ರೀ ಕೊಡಮಣಿತ್ತಾಯ ದೈವಸ್ಥಾನಅರಮನೆ ಬೆಟ್ಟ:ಸಿಂಹ ಸಂಕ್ರಮಣ ಹಾಗೂ ಶ್ರೀ ಕೊಡಮಣಿತ್ತಾಯ ದೈವದ ಸೋಣದ ಕೋಲ

Suddi Udaya

ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಗುರುವಾಯನಕೆರೆ:ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ: ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

Suddi Udaya
error: Content is protected !!