July 16, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ಐಆರ್ ಬಗ್ಗೆ ಮತದಾರರಿಗೆ ಇನ್ನಷ್ಟು ಮಾಹಿತಿ ನೀಡಲು ಶನಿವಾರ, ಭಾನುವಾರ ವಿಶೇಷ ಅಭಿಯಾನ : ವಿ.ಅನ್ಬುಕುಮಾ‌ರ್

ಬೆಳ್ತಂಗಡಿ: ರಾಜ್ಯದಲ್ಲಿ ಮತದಾರರ ಪಟ್ಟಿಯ, ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್)ಯ ಪ್ರಮುಖ ಹಂತ ಗಣತಿ ನಮೂನೆಗಳ ವಿತರಣೆ ಕಾರ್ಯ ಬಹುತೇಕ ಮುಕ್ತಾಯದ ಹಂತದಲ್ಲಿದ್ದು ಈಗ ಗಣತಿ ನಮೂನೆಗಳ ಭರ್ತಿಗೆ ಎದುರಾಗುವ ಸಮಸ್ಯೆ, ಗೊಂದಲ ಹಾಗೂ ಮಾಹಿತಿಯ ಕೊರತೆಗೆ ನೆರವು ನೀಡಲು ರಾಜ್ಯಾದ್ಯಂತ ಶನಿವಾರ ಮತ್ತು ರವಿವಾರ ವಿಶೇಷ ಅಭಿಯಾನ ನಡೆಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್‌ ತಿಳಿಸಿದ್ದಾರೆ.

ಜು.15ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗಣತಿ ನಮೂನೆ ಭರ್ತಿ ಮಾಡುವ ಹಂತದಲ್ಲಿ ಮತದಾರರಿಗೆ ಯಾವುದೇ ಸಮಸ್ಯೆ ಅಥವಾ ಗೊಂದಲಗಳು ಉಂಟಾಗದಂತೆ ವ್ಯವಸ್ಥೆ ಮಾಡುವುದು ಚುನಾವಣಾ ಆಯೋಗದ ಆದ್ಯತೆಯಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳನ್ನು ಗುರಿಯಾಗಿಟ್ಟುಕೊಂಡು ಶನಿವಾರ ಮತ್ತು ರವಿವಾರ ವಿಶೇಷ ಅಭಿಯಾನ ನಡೆಸಲಾಗುವುದು ಎಂದರು.

2002ರ ಮತದಾರರ ಪಟ್ಟಿಯಲ್ಲಿ ಮಾಹಿತಿ ಲಭ್ಯವಾಗದಿದ್ದರೂ, ಅಂತವರೂ ಗಣತಿ ನಮೂನೆಗಳನ್ನು ಭರ್ತಿ ಮಾಡಿ, ಫೋಟೋ ಅಂಟಿಸಿ ಬಿಎಲ್‌ಒಗಳಿಗೆ ಕೊಡಬೇಕು. ಅವರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಪ್ರಕಟವಾಗಿರುತ್ತದೆ. ಬಳಿಕ ಇ.ಆರ್. ಒ ಗಳಿಂದ ನೋಟಿಸ್ ಬರುತ್ತದೆ. ಅದಕ್ಕೆ ಚುನಾವಣ ಆಯೋಗ ಗುರುತಿಸಿರುವ 12 ದಾಖಲೆಗಳ ಪೈಕಿ ಯಾವುದಾದರೂ ಒಂದನ್ನು ಸಲ್ಲಿಸಿದರೆ, ನಿಯಮಾನುಸಾರ ಪರಿಶೀಲಿಸಿ ಇ.ಆ‌ರ್.ಒ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

Related posts

ಉಜಿರೆ ಎಸ್.ಡಿ.ಎಂ ಕಾಲೇಜು: ಸಾಧಕರ ದಿನ-229 ವಿದ್ಯಾರ್ಥಿ ಸಾಧಕರಿಗೆ ಪ್ರಶಸ್ತಿ ಪತ್ರ ವಿತರಣೆ

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ವಿ.ಪ. ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಉರುವಾಲು: ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ತೋಡಿಗೆ ಬಿದ್ದ ಕಾರ್ಮಿಕ ಮೃತ್ಯು

Suddi Udaya

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಪುತ್ರಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ದಿಮ್ಮಿಗಳ ತೆರವು ಕಾರ್ಯ

Suddi Udaya

ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ನಗಬೇಕು ಆಗಾಗ ಬದುಕಿನೊಳಗೆ’ ತರಬೇತಿ ಕಾರ್ಯಕ್ರಮ

Suddi Udaya
error: Content is protected !!