26.5 C
ಪುತ್ತೂರು, ಬೆಳ್ತಂಗಡಿ
July 16, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ “ಶ್ರೀ ಮಂಜುನಾಥ ಬನ್ನಿಸ್ ಟಂಟೋಲ”ಕ್ಕೆ ಚಾಲನೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ “ಶ್ರೀ ಮಂಜುನಾಥ ಬನ್ನಿಸ್ ಟಂಟೋಲ” ಘಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ. ಆರ್. ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು. ಅವರು ಮಕ್ಕಳಿಗೆ ಬನ್ನಿಸ್ ಎಪ್ರೋನ್ ಧರಿಸುವ ಮೂಲಕ ಘಟಕವನ್ನು ಉದ್ಘಾಟಿಸಿ, ಮಕ್ಕಳಲ್ಲಿ ಶಿಸ್ತು, ಸೇವಾ ಮನೋಭಾವ, ನಾಯಕತ್ವ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸುವ ಉದ್ದೇಶವನ್ನು ತಿಳಿಸಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಬೆಳ್ತಂಗಡಿಯ ಕಾರ್ಯದರ್ಶಿಯಾದ ಶ್ರೀಮತಿ ಪ್ರಮೀಳಾ ಪೂಜಾರಿ ಅವರ ನೇತೃತ್ವದಲ್ಲಿ ಮಕ್ಕಳಿಗೆ ವಿವಿಧ ಬನ್ನಿಸ್ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬ, 75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು: ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ: ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಜಯದಶಮಿ ಪಥಸಂಚಲನ

Suddi Udaya

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

Suddi Udaya

ಕಣಿಯೂರು: ದೀಪಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!