September 1, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ ಪ್ರಕರಣ: ಆರೋಪಿಗಳು 6 ದಿನ ಪೊಲೀಸ್ ಕಷ್ಟಡಿಗೆ

ಬೆಳ್ತಂಗಡಿ: ನಕಲಿ ನೋಟು ಪ್ರಿಂಟ್ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧ ಏಳು ಮಂದಿ ಆರೋಪಿಗಳನ್ನು ಉಪ್ಪಿನಂಗಡಿ ಇನ್ಸ್‌ಪೆಕ್ಟರ್ ನಾಗರಾಜ್ ಇ.ಪಿ ನೇತೃತ್ವದ ತಂಡ ಜು.16ರಂದು ಸಂಜೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ಆರು ದಿನಗಳ ಕಾಲ ಪೊಲೀಸ್ ಕಷ್ಟಡಿಗೆ ನೀಡಿ ಆದೇಶಿಸಿದೆ.

ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ನಕಲಿ ನೋಟು ಪ್ರಿಂಟ್ ಮಾಡುತ್ತಿದ್ದ ಕೇಂದ್ರವೊಂದಕ್ಕೆ ಜು.15 ರಂದು ಮಧ್ಯರಾತ್ರಿ 1 ಗಂಟೆಗೆ ಉಪ್ಪಿನಂಗಡಿ ಪೊಲೀಸರ ನೇತೃತ್ವದ ತಂಡ ದಾಳಿ ನಡೆಸಿದ ಸಂದರ್ಭದ ಬಂಧಿತ 7 ಏಳು ಮಂದಿ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ನಿನ್ನಿಕಲ್ಲು ನಿವಾಸಿ ಅಬ್ದುಲ್ ಖಾದರ್ ಮಗ ಸಿರಾಜುದ್ದೀನ್(34), ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಉಸ್ಮಾನ್ ಪಿಎ ಮಗ ಇರ್ಷಾದ್(31), ಪುತ್ತೂರು ಕಸಬ ಗ್ರಾಮದ ಬಪ್ಪಳಿಗೆ ನಿವಾಸಿ ಹಸನ್ ಕುಂಙ ಮಗ ಇಬ್ರಾಹಿಂ(60), ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಎಂ.ಎ.ಆರ್ಕೇಡ್ ಬಿಲ್ಡಿಂಗ್ ನಿವಾಸಿ ಮಹಮ್ಮದ್ ಮಗ ಸಲ್ಮಾನ್ ಪಾರೀಸ್(25), ಕಾಸರಗೋಡು ಜಿಲ್ಲೆಯ ಚಂಗುಲ ಗ್ರಾಮದ ಚೆನ್ನಡ್ಕ್ ಕ್ವಾಟ್ರಸ್ ನಿವಾಸಿ ಮಹಮ್ಮದ್ ಮಗ ಶರೀಫ್(51), ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮರಕವಾಡ ಗ್ರಾಮದ ಪುಂಡಲೀಕ ಮಗ ಸಂದೀಪ್ ಪುಂಡಲೀಕ ಶೋಳಂಬಿ(30), ಕಾಸರಗೋಡು ಜಿಲ್ಲೆಯ ಆಮೂರು ಗ್ರಾಮದ ಪೊರ್ಕಡ ನಿವಾಸಿ ಅಬ್ದುಲ ಮಗ ಮಹಮ್ಮದ್ ನಬಾಸ್(37) ಬಂಧಿತ ಆರೋಪಿಗಳು ಜು.16 ರಂದು ಸಂಜೆ ಬೆಳ್ತಂಗಡಿ ನ್ಯಾಯಾಲಯದ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳಾದ ಮನು.ಬಿ.ಕೆ ರವರ ಮುಂದೆ ಹಾಜರು ಪಡಿಸಿ, ಬಳಿಕ ವಿಚಾರಣೆಯ ಹಿನ್ನೆಲೆ ನ್ಯಾಯಾಲಯ ಆರು ದಿನಗಳ ಕಸ್ಟಡಿಗೆ ನೀಡಿ ಆದೇಶಿಸಿದೆ.

Related posts

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

Suddi Udaya

ನಾವೂರು ಕೈಕಂಬ-ಹತ್ಯಡ್ಕ-ಸಂಪರ್ಕ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ರೂ. 300ಲಕ್ಷ ಮಂಜೂರಿಗೆ ಕ್ರಮ ಕೈಗೊಳ್ಳುವಂತೆ ತಾ.ಪಂ ಇ.ಒ ಪತ್ರ: ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದ ಸುದ್ದಿ ‘ಉದಯ ಪತ್ರಿಕೆ’

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ : ಹಳೆಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ

Suddi Udaya

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya
error: Content is protected !!