July 16, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಬೆಳ್ತಂಗಡಿ: ತಾಲೂಕಿನಲ್ಲಿ ಎರಡು ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ತಣ್ಣೀರುಪಂತದ ಕೊಡಂಗೆ ಮತ್ತು ತೆಕ್ಕಾರಿನ ಬಾಜಾರು ಅಂಗನವಾಡಿ ಕಾರ್ಯಕರ್ತೆ ಹುದ್ದೆ ಹಾಗೂ ಬಾರ್ಯದ ಪೆರಿಯೊಟ್ಟು, ಕೊಕ್ಕಡದ ಹಳ್ಳಿಂಗೇರಿ, ಉಜಿರೆಯ ಅತ್ತಾಜೆ, ಕೊಯ್ಯೂರಿನ ಬಜಿಲ, ಮಲವಂತಿಗೆಯ ಎಳನೀರು ಮತ್ತು ಗುತ್ಯಡ್ಕ, ನೆರಿಯದ ಬಾಂಜಾರುಮಲೆ, ಬೆಳಾಲಿನ ಕೊಲ್ಪಾಡಿ, ಕೊಯ್ಯೂರಿನ ಪೆರ್ಮುದೆ ಕೊಪ್ಪದಬೈಲ್, ಚಿಬಿದ್ರೆಯ ಕಲ್ಲಗುಂಡ, ಇಂದಬೆಟ್ಟಿನ ಇಂದಬೆಟ್ಟು, ಕೊಕ್ಕಡದ ಸೌತಡ್ಕ, ಬೆಳಾಲಿನ ದೊಂಪದಪಲ್ಕೆ ಬಿ ಇಲ್ಲಿ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ನೆರಿಯ ಬಾಂಜಾರುಮಲೆ ಪ.ಪಂಕ್ಕೆ ಮೀಸಲಾಗಿದ್ದು, ಉಳಿದ ಎಲ್ಲಾ ಹುದ್ದೆಗಳು ಸಾಮಾನ್ಯರಿಗೆ ನೀಡಲಾಗಿದೆ.

ಅಂಗನವಾಡಿ ಕಾರ್ಯಕರ್ತೆಗೆ ಪಿಯುಸಿ, ಸಹಾಯಕಿ ಎಸ್ಸೆಸ್ಸೆಲ್ಸಿ ಪಾಸಾಗಿರಬೇಕು. ವಯಸ್ಸು 19ರಿಂದ 35 ವರ್ಷ, ಅರ್ಜಿ ಸಲ್ಲಿಸಲು ಆ.10 ಕೊನೆಯ ದಿನವಾಗಿದೆ. ಅರ್ಜಿ ಫಾರಂಗಳನ್ನು ಶಿಶುಅಭಿವೃದ್ಧಿ ಯೋಜನಾ ಕಚೇರಿಯಿಂದ ಪಡೆದು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯನ್ನು ೦೮೨೫೬-೨೯೫೧೩೪ನ್ನು ಸಂಪರ್ಕಿಸಬಹುದು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಗುರುವಾಯನಕೆರೆ ಶಕ್ತಿನಗರ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಲಾರಿ ಡಿಕ್ಕಿ : ಓರ್ವ ಮೃತ್ಯು,

Suddi Udaya

ಮಾಲಾಡಿ ಗ್ರಾ.ಪಂ. ಮತ್ತು ಗ್ರಾ.ಪಂ. ಗ್ರಂಥಾಲಯದ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶೇ.95.25

Suddi Udaya

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya
error: Content is protected !!