25.7 C
ಪುತ್ತೂರು, ಬೆಳ್ತಂಗಡಿ
August 31, 2026
Uncategorized

ಅಳದಂಗಡಿಯ ಶ್ರೀರಂಗ ಮಯ್ಯರಿಗೆ ಜಿಲ್ಲಾ ಮಟ್ಟದ ಸೇವಾ ಭೂಷಣ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ಪುತ್ತೂರು ಮತ್ತು ಕಡಬ ತಾಲೂಕು ಘಟಕದ ವತಿಯಿಂದ ಪುತ್ತೂರಿನ ಬಂಟರ ಭವನದಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ ನೌಕರರ ಜಿಲ್ಲಾ ಶೈಕ್ಷಣಿಕ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತನ್ನ ದಕ್ಷ ಹಾಗೂ ಪ್ರಾಮಾಣಿಕ ಸೇವೆಗಾಗಿ ಜಿಲ್ಲಾ ಮಟ್ಟದ ಸೇವಾಭೂಷಣ ಪ್ರಶಸ್ತಿ ಪಡೆಯಬೇಕಿದ್ದ ಧರೆಗುಡ್ಡೆಯ ಸರಕಾರಿ ಪ್ರೌಢಶಾಲೆಯ ಪ್ರಥಮ ದರ್ಜೆ ಸಹಾಯಕ ಎ. ಶೀರಂಗ ಮಯ್ಯ ಅವರಿಗೆ ಮಂಗಳೂರಿನಲ್ಲಿ ಇತ್ತೀಚೆಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ನಾರಾಯಣ ಮಯ್ಯ ಮತ್ತು ಕೆ. ಸೀತಮ್ಮ ದಂಪತಿಯ ಪುತ್ರನಾಗಿ 1970ರ ಆಗಸ್ಟ್ 4ರಂದು ಅಳದಂಗಡಿಯಲ್ಲಿ ಜನಿಸಿದ ಶ್ರೀರಂಗ ಮಯ್ಯ ಅವರು ತಮ್ಮ ವಿದ್ಯಾಭ್ಯಾಸದ ಬಳಿಕ 1990ರ ಜುಲೈ 19ರಂದು ಪಂಜ ಸರಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ವೃತ್ತಿಗೆ ಸೇರಿದ್ದರು. 1995ರ ಜೂನ್ 4ರಿಂದ 2008ರ ಮಾರ್ಚ್ 4ರವರೆಗೆ ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು 2008ರ ಮಾರ್ಚ್ 5ರಿಂದ 2012ರ ಅಕ್ಟೋಬರ್ 2ರವರೆಗೆ ಪದ್ಮುಂಜ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿದ್ದ ಇವರು ಬಳಿಕ ಭಡ್ತಿ ಪಡೆದು 2012ರ ಅಕ್ಟೋಬರ್ 3ರಿಂದ ಧರೆಗುಡ್ಡೆ ಸರಕಾರಿ ಪ್ರೌಢಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇವರ ದಕ್ಷ ಮತ್ತು ಪ್ರಾಮಾಣಿಕ ಸೇವೆ ಗುರುತಿಸಿ ಜಿಲ್ಲಾ ಮಟ್ಟದ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಯು.ಟಿ. ಖಾದರ್ ಅವರಿಂದ ಶ್ರೀರಂಗ ಮಯ್ಯ ಅವರು ಪ್ರಶಸ್ತಿ ಸ್ವೀಕರಿಸಿದರು.

Related posts

ಕೆ.ಎಸ್.ಸಿ.ಎ 14 ವರ್ಷದಲ್ಲಿನ ಕ್ರಿಕೆಟ್ ತಂಡಕ್ಕೆ ಆಯ್ಕೆ ಟ್ರಯಲ್ಸ್ ಪ್ರಕ್ರಿಯೆಯಲ್ಲಿ ತಾಲೂಕಿನ 6 ವಿದ್ಯಾರ್ಥಿಗಳು ಭಾಗಿ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya

ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!