July 16, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ಐಆರ್ ಬಗ್ಗೆ ಮತದಾರರಿಗೆ ಇನ್ನಷ್ಟು ಮಾಹಿತಿ ನೀಡಲು ಶನಿವಾರ, ಭಾನುವಾರ ವಿಶೇಷ ಅಭಿಯಾನ : ವಿ.ಅನ್ಬುಕುಮಾ‌ರ್

ಬೆಳ್ತಂಗಡಿ: ರಾಜ್ಯದಲ್ಲಿ ಮತದಾರರ ಪಟ್ಟಿಯ, ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್)ಯ ಪ್ರಮುಖ ಹಂತ ಗಣತಿ ನಮೂನೆಗಳ ವಿತರಣೆ ಕಾರ್ಯ ಬಹುತೇಕ ಮುಕ್ತಾಯದ ಹಂತದಲ್ಲಿದ್ದು ಈಗ ಗಣತಿ ನಮೂನೆಗಳ ಭರ್ತಿಗೆ ಎದುರಾಗುವ ಸಮಸ್ಯೆ, ಗೊಂದಲ ಹಾಗೂ ಮಾಹಿತಿಯ ಕೊರತೆಗೆ ನೆರವು ನೀಡಲು ರಾಜ್ಯಾದ್ಯಂತ ಶನಿವಾರ ಮತ್ತು ರವಿವಾರ ವಿಶೇಷ ಅಭಿಯಾನ ನಡೆಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್‌ ತಿಳಿಸಿದ್ದಾರೆ.

ಜು.15ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗಣತಿ ನಮೂನೆ ಭರ್ತಿ ಮಾಡುವ ಹಂತದಲ್ಲಿ ಮತದಾರರಿಗೆ ಯಾವುದೇ ಸಮಸ್ಯೆ ಅಥವಾ ಗೊಂದಲಗಳು ಉಂಟಾಗದಂತೆ ವ್ಯವಸ್ಥೆ ಮಾಡುವುದು ಚುನಾವಣಾ ಆಯೋಗದ ಆದ್ಯತೆಯಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳನ್ನು ಗುರಿಯಾಗಿಟ್ಟುಕೊಂಡು ಶನಿವಾರ ಮತ್ತು ರವಿವಾರ ವಿಶೇಷ ಅಭಿಯಾನ ನಡೆಸಲಾಗುವುದು ಎಂದರು.

2002ರ ಮತದಾರರ ಪಟ್ಟಿಯಲ್ಲಿ ಮಾಹಿತಿ ಲಭ್ಯವಾಗದಿದ್ದರೂ, ಅಂತವರೂ ಗಣತಿ ನಮೂನೆಗಳನ್ನು ಭರ್ತಿ ಮಾಡಿ, ಫೋಟೋ ಅಂಟಿಸಿ ಬಿಎಲ್‌ಒಗಳಿಗೆ ಕೊಡಬೇಕು. ಅವರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಪ್ರಕಟವಾಗಿರುತ್ತದೆ. ಬಳಿಕ ಇ.ಆರ್. ಒ ಗಳಿಂದ ನೋಟಿಸ್ ಬರುತ್ತದೆ. ಅದಕ್ಕೆ ಚುನಾವಣ ಆಯೋಗ ಗುರುತಿಸಿರುವ 12 ದಾಖಲೆಗಳ ಪೈಕಿ ಯಾವುದಾದರೂ ಒಂದನ್ನು ಸಲ್ಲಿಸಿದರೆ, ನಿಯಮಾನುಸಾರ ಪರಿಶೀಲಿಸಿ ಇ.ಆ‌ರ್.ಒ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

Related posts

ಉಜಿರೆ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲಾ 2006ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ “ಮೆಲುಕು” ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು , ಹಣ್ಣು ಹಂಪಲು ವಿತರಣೆ

Suddi Udaya

ಬಹುನಿರೀಕ್ಷಿತ ರಾನಿ ಚಲನಚಿತ್ರದ ನಾಯಕ ನಟ ಗಂಭೀರ ಗಾಯ: ಕಾರ್ಯಕಾರಿ ನಿರ್ಮಾಪಕ ಕೊಕ್ರಾಡಿಯ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರು

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya

ಭಾರತೀಯ ಸೇನೆಯಲ್ಲಿ ಸುಮಾರು 29 ವರ್ಷಗಳ ಕಾಲ ದೇಶದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಸೈನಿಕ ಕುಕ್ಕೇಡಿಯ ಚಂದ್ರಹಾಸ ಪೂಜಾರಿ ನಿಧನ: ತಿಂಗಳ ಅಂತರದಲ್ಲಿ ‌ ಪತಿ -ಪತ್ನಿ ಸಾವು

Suddi Udaya
error: Content is protected !!