23.1 C
ಪುತ್ತೂರು, ಬೆಳ್ತಂಗಡಿ
July 16, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಗುರುವಾಯನಕೆರೆ: ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಜೊತೆಯಲ್ಲಿದ್ದ ಕಾಶಿಪಟ್ಣದ ಇಬ್ರಾಹಿಂ ಲತೀಫ್ ಬಂಧನ

ಬೆಳ್ತಂಗಡಿ : ಕುವೆಟ್ಟು ಗ್ರಾಮದ ಶಕ್ತಿನಗರದ ಎಸ್.ಎಲ್.ವಿ ಇ- ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್‌ನಲ್ಲಿ ಜು.೧ ರಂದು ನಡೆದ ಕಳ್ಳತನ ಪ್ರಕರಣ ಸಂಬಂಧ ಸಾವನ್ನಪ್ಪಿದ ಮುಸ್ತಾಕ್ ಜೊತೆಯಲ್ಲಿದ್ದ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಬೆಳ್ತಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮದ ನಿವಾಸಿ ಇಸುಬು ಎಂಬವರ ಪುತ್ರ ಇಬ್ರಾಹಿಂ ಲತೀಫ್(೩೬ವ) ಎಂಬಾತನನ್ನು ಬೆಳ್ತಂಗಡಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಮ್ ನೇತೃತ್ವದ ತಂಡ ಕಾಶಿಪಟ್ಣದಲ್ಲಿ ಜು.೧೪ ರಂದು ಸಂಜೆ ೩ ಗಂಟೆಗೆ ಬಂಧಿಸಿ ವಿಚಾರಣೆ ನಡೆಸಿ ಜು.೧೫ ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣದ ವಿವರ: ಕುವೆಟ್ಟು ಗ್ರಾಮದ ಶಕ್ತಿನಗರ ಎಂಬಲ್ಲಿರುವ ಎಸ್.ಎಲ್.ವಿ ಇ ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್ ನಲ್ಲಿ ಜು.೧ ರಂದು ರಿಸೀವಿಂಗ್ ಸ್ಟೇಷನ್ ಕಂಪೌಂಡ್‌ನ ಒಳಗೆ ತೊಂಡೆಕಾಯಿ ಬೆಳೆಯಲು ಚಪ್ಪರಕ್ಕೆ ಹಾಕಿದ್ದ ಜಿಐ ಸ್ಟೀಲ್ ವಯರ್ ಗೆ ಅಪರಿಚಿತ ಗಂಡಸು ಕುತ್ತಿಗೆಗೆ ವಯರ್ ಸಿಕ್ಕಿಕೊಂಡು ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ೩೫/೨೦೨೬ ರಂತೆ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣದಲ್ಲಿ ಮೃತಪಟ್ಟ ವ್ಯಕ್ತಿ ಹೆಸರು ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಜನತಾ ಕಲೋನಿ ನಿವಾಸಿ ಶರೀಫ್.ಕೆ ಮಗ ಮುಸ್ತಾಕ್(೨೭ವ) ಎಂಬುದಾಗಿ ತಿಳಿದುಬಂದಿದ್ದು, ಪ್ರಕರಣದಲ್ಲಿ ಮೃತಪಟ್ಟ ಮುಸ್ತಾಕ್‌ನ ಮೃತದೇಹ ಪತ್ತೆಯಾದ ಸ್ಥಳದ ಹತ್ತಿರ ರಿಸಿವಿಂಗ್ ಸ್ಟೇಷನ್ ನ ಕಂಪೌಂಡ್ ಒಳಗೆ ಉಪಯೋಗಿಸಿ ಉಳಿದ ಹಳೆಯ ಅಲ್ಯೂಮಿನಿಯಂ ವಯರ್ ತುಂಡುಗಳು ಬಿದ್ದಿರುವುದನ್ನು ಕಂಡು ಈ ಬಗ್ಗೆ ಅನುಮಾನಗೊಂಡ ಮ್ಯಾನೇಜರ್ ರಾಜೇಂದ್ರನ್ ಅವರು ತಮ್ಮ ರಿಸೀವಿಂಗ್ ಸ್ಟೇಷನ್ ನ ಕಂಪೌಂಡ್ ಒಳಗೆ ಇರಿಸಿದ ಅಲ್ಯೂಮಿನಿಯಂ ವಯರ್ ನ ಬಂಡಲ್‌ಗಳು, ಮತ್ತು ಇನ್ನಿತರ ಸಲಕರಣೆಗಳನ್ನು ಪರಿಶೀಲನೆ ನಡೆಸಿದಾಗ ಹಳೆಯ ಅಲ್ಯೂಮಿನಿಯಂ ವಯರ್‌ಗಳು ಕಳ್ಳತನವಾಗಿರುವುದು ತಿಳಿದು ಈ ವಿಚಾರ ಮೇಲಾಧಿಕಾರಿಗಳಿಗೆ ತಿಳಿಸಿದ ಬಳಿಕ ಮೇಲಾಧಿಕಾರಿಗಳು ಬಂದು ಕೂಲಂಕುಷವಾಗಿ ಪರಿಶೀಲನೆ ನಡೆಸಿದಾಗ ಅಂದಾಜು ಮೌಲ್ಯ ೫೦ ಸಾವಿರ ರೂಪಾಯಿ ಮೌಲ್ಯ ಸುಮಾರು ೧೧೦೦ ಕೆಜಿಯಷ್ಟು ಹಳೆಯ ಅಲ್ಯೂಮಿನಿಯಂ ವಯರ್ ಗಳು ಕಳ್ಳತನವಾಗಿರುವುದಾಗಿ ಬೆಳಕಿಗೆ ಬಂದಿತ್ತು.

ಮ್ಯಾನೇಜರ್ ಆಗಿರುವ ರಾಜೇಂದ್ರನ್ ಎಂಬವರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಳ್ಳತನ ಮಾಡಿದ ಮೃತಪಟ್ಟ ಮುಸ್ತಾಕ್ ಮತ್ತು ಇತರರ ವಿರುದ್ಧ ಕಲಂ: ೩೩೧(೪), ೩೦೫ ಜೊತೆಗೆ ೩(೫)ಬಿ. ಎನ್ ಎಸ್ ಯಂತೆ ಜು.೧೧ ರಂದು ಪ್ರಕರಣ ದಾಖಲಿಸಲಾಗಿತ್ತು. ತನಿಖೆ ನಡೆಸಿದಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಮ್ ಮತ್ತು ಸಿಕಂದರ್ ಪಾಷ ತಂಡದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

Related posts

ಪಾದಯಾತ್ರೆಗೆ ಹೊರಟಿದ್ದ ಯುವಕನಾಪತ್ತೆ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಪೆಟ್ರೋಲು, ಡೀಸೆಲ್ ಏರಿಕೆ ಬೆನ್ನಲ್ಲೇ ಸಿಎನ್‌ಜಿ ದರ 2 ರೂ.ಗೆ ಏರಿಕೆ

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಗೆ ಸತತ ಎಂಟನೇ ಬಾರಿ ಶೇ100 ಫಲಿತಾಂಶ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya
error: Content is protected !!