September 1, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ “ಶ್ರೀ ಮಂಜುನಾಥ ಬನ್ನಿಸ್ ಟಂಟೋಲ”ಕ್ಕೆ ಚಾಲನೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ “ಶ್ರೀ ಮಂಜುನಾಥ ಬನ್ನಿಸ್ ಟಂಟೋಲ” ಘಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ. ಆರ್. ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು. ಅವರು ಮಕ್ಕಳಿಗೆ ಬನ್ನಿಸ್ ಎಪ್ರೋನ್ ಧರಿಸುವ ಮೂಲಕ ಘಟಕವನ್ನು ಉದ್ಘಾಟಿಸಿ, ಮಕ್ಕಳಲ್ಲಿ ಶಿಸ್ತು, ಸೇವಾ ಮನೋಭಾವ, ನಾಯಕತ್ವ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸುವ ಉದ್ದೇಶವನ್ನು ತಿಳಿಸಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಬೆಳ್ತಂಗಡಿಯ ಕಾರ್ಯದರ್ಶಿಯಾದ ಶ್ರೀಮತಿ ಪ್ರಮೀಳಾ ಪೂಜಾರಿ ಅವರ ನೇತೃತ್ವದಲ್ಲಿ ಮಕ್ಕಳಿಗೆ ವಿವಿಧ ಬನ್ನಿಸ್ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಸರ್ಕಾರಿ ಪ್ರೌಢಶಾಲೆ ವೇಣೂರುನಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ: ಪುಷ್ಪಾರ್ಚನೆ ಹಾಗೂ ಮೆರವಣಿಗೆ ಮೂಲಕ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆ

Suddi Udaya

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya
error: Content is protected !!