26.5 C
ಪುತ್ತೂರು, ಬೆಳ್ತಂಗಡಿ
July 16, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ: ಕೊಲೆ ಆರೋಪಿಯ ಗುರುತು ಪತ್ತೆ ಹಚ್ಚಿದ ಪೊಲೀಸರು

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ. ಸಿ. ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳ ಮೇಲೆ ಯುವಕನೋರ್ವ ಕತ್ತಿಯಿಂದ ಭೀಕರವಾಗಿ ದಾಳಿ ನಡೆಸಿ ಹತ್ಯೆ ಮಾಡಿ ಪರಾರಿಯಾಗಿರುವ ಆಘಾತಕಾರಿ ಘಟನೆ ಜು.16 ರಂದು ಸಂಜೆ ಸಂಭವಿಸಿದೆ. ಈ ಬಗ್ಗೆ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಕೊಲೆ ಮಾಡಿದ ಯುವಕನ ಮಾಹಿತಿಯನ್ನು ಪೊಲೀಸರು ಪತ್ತೆ ಹಚ್ಚಿ ಬಂಧನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಪೊಲೀಸ್ ಮಾಹಿತಿ ಪ್ರಕಾರ ಕೊಲೆ ಮಾಡಿದ ಯುವಕ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಚೇತನ್ ಗೌಡ ಎಂಬುವುದಾಗಿ ಮಾಹಿತಿ ಲಭ್ಯವಾಗಿದೆ. ಈತ ಕೊಲೆಯಾದ ಯುವತಿಯ ದೂರದ ಸಂಬಂಧಿಯಾಗಿದ್ದು ಹಾಗೂ ಯುವತಿಯನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದ ಎಂದು ಮಾಹಿತಿ ಲಭಿಸಿದೆ.

ಬಂಟ್ಬಾಳ ತಾಲೂಕಿನ ಉಳಿಗ್ರಾಮ ನಿವಾಸಿ ಬಾಲಕೃಷ್ಣ ಗೌಡ ಮಗಳು ಲಾವಣ್ಯ(25) ಸಾವನ್ನಪ್ಪಿದವಳು. ಬಿ. ಸಿ. ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಕಕ್ಕೆಪದವು ಮಾರ್ಗವಾಗಿ ಸಂಚಾರಿಸುವ ಸರ್ಕಾರಿ ಬಸ್ಸಿನೊಳಗೆ ಯುವತಿ ಕುಳಿತಿದ್ದಳು. ಈ ವೇಳೆ ಆಕೆಯನ್ನು ಹಿಂಬಾಲಿಸಿಕೊಂಡು ಬಂದ ಯುವಕ, ಬಸ್ಸಿನೊಳಗೆ ನುಗ್ಗಿ ಯುವತಿಯನ್ನು ಬಲವಂತವಾಗಿ ಕೆಳಗಿಳಿಸಿದ್ದಾನೆ. ಬಳಿಕ ಸಾರ್ವಜನಿಕರ ಸಮ್ಮುಖದಲ್ಲೇ ಕತ್ತಿಯಿಂದ ಆಕೆಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಕೊಂದು ಸ್ಥಳದಿಂದ ಪರಾರಿಯಾಗಿದ್ದಾನೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ರೂ ಫಲಿಸದೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

Related posts

ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಜಯ; ಹಗಲಿರುಳು ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ತಾಲೂಕಿನ ನಾಲ್ಕು ಮಂದಿ ಯಕ್ಷಗಾನ ಸಾಧಕರಿಗೆ ಪ್ರಶಸ್ತಿ

Suddi Udaya

ಪಟ್ಟೂರಿನಲ್ಲಿ ಪೊಲೀಸರು ಜಪ್ತಿ ಮಾಡಿದ ಮನೆಗೆ ತಾಲೂಕು ಮುಸ್ಲಿಂ ಮುಖಂಡರ ಭೇಟಿ: ಸಂತ್ರಸ್ತೆ ಝೊಹರಾ ಕುಟುಂಬಸ್ಥರ ಜೊತೆ ಮಾತುಕತೆ

Suddi Udaya

ಬಂಗಾಡಿ ಫ್ರೆಂಡ್ಸ್ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ:

Suddi Udaya

ಡಿ.7: ಪುದುವೆಟ್ಟುವಿನಲ್ಲಿ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆ ಶುಭಾರಂಭ

Suddi Udaya
error: Content is protected !!