September 1, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ: ಕೊಲೆ ಆರೋಪಿಯ ಗುರುತು ಪತ್ತೆ ಹಚ್ಚಿದ ಪೊಲೀಸರು

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ. ಸಿ. ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳ ಮೇಲೆ ಯುವಕನೋರ್ವ ಕತ್ತಿಯಿಂದ ಭೀಕರವಾಗಿ ದಾಳಿ ನಡೆಸಿ ಹತ್ಯೆ ಮಾಡಿ ಪರಾರಿಯಾಗಿರುವ ಆಘಾತಕಾರಿ ಘಟನೆ ಜು.16 ರಂದು ಸಂಜೆ ಸಂಭವಿಸಿದೆ. ಈ ಬಗ್ಗೆ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಕೊಲೆ ಮಾಡಿದ ಯುವಕನ ಮಾಹಿತಿಯನ್ನು ಪೊಲೀಸರು ಪತ್ತೆ ಹಚ್ಚಿ ಬಂಧನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಪೊಲೀಸ್ ಮಾಹಿತಿ ಪ್ರಕಾರ ಕೊಲೆ ಮಾಡಿದ ಯುವಕ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಚೇತನ್ ಗೌಡ ಎಂಬುವುದಾಗಿ ಮಾಹಿತಿ ಲಭ್ಯವಾಗಿದೆ. ಈತ ಕೊಲೆಯಾದ ಯುವತಿಯ ದೂರದ ಸಂಬಂಧಿಯಾಗಿದ್ದು ಹಾಗೂ ಯುವತಿಯನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದ ಎಂದು ಮಾಹಿತಿ ಲಭಿಸಿದೆ.

ಬಂಟ್ಬಾಳ ತಾಲೂಕಿನ ಉಳಿಗ್ರಾಮ ನಿವಾಸಿ ಬಾಲಕೃಷ್ಣ ಗೌಡ ಮಗಳು ಲಾವಣ್ಯ(25) ಸಾವನ್ನಪ್ಪಿದವಳು. ಬಿ. ಸಿ. ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಕಕ್ಕೆಪದವು ಮಾರ್ಗವಾಗಿ ಸಂಚಾರಿಸುವ ಸರ್ಕಾರಿ ಬಸ್ಸಿನೊಳಗೆ ಯುವತಿ ಕುಳಿತಿದ್ದಳು. ಈ ವೇಳೆ ಆಕೆಯನ್ನು ಹಿಂಬಾಲಿಸಿಕೊಂಡು ಬಂದ ಯುವಕ, ಬಸ್ಸಿನೊಳಗೆ ನುಗ್ಗಿ ಯುವತಿಯನ್ನು ಬಲವಂತವಾಗಿ ಕೆಳಗಿಳಿಸಿದ್ದಾನೆ. ಬಳಿಕ ಸಾರ್ವಜನಿಕರ ಸಮ್ಮುಖದಲ್ಲೇ ಕತ್ತಿಯಿಂದ ಆಕೆಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಕೊಂದು ಸ್ಥಳದಿಂದ ಪರಾರಿಯಾಗಿದ್ದಾನೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ರೂ ಫಲಿಸದೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

Related posts

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

ದ.ಕ ಹಾಲು ಒಕ್ಕೂಟದ ವತಿಯಿಂದ ಹೆಣ್ಣು ಕರುಗಳ ಪ್ರದರ್ಶನ

Suddi Udaya

ಜ.22 : ಧರ್ಮಸ್ಥಳದಲ್ಲಿ‌ ಶುಭಾರಂಭಗೊಳ್ಳಲಿದೆ ಕಸ್ತೂರಿ ವೆರೈಟಿ ಸೆಂಟರ್

Suddi Udaya

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಸುದ್ದಿ ಉದಯ ಬೆಳಕಿನ ಹಬ್ಬ ದೀಪಾವಳಿ ವಿಶೇಷ ಸಂಚಿಕೆ: ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ:ಅದೃಷ್ಟವಂತ ಓದುಗರಿಗೆ ರೂ.25 ಸಾವಿರ ಬಹುಮಾನದ ಕೂಪನ್ ಡ್ರಾ

Suddi Udaya
error: Content is protected !!