July 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವನಮಹೋತ್ಸವ ಆಚರಣೆ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಪರಿಸರದಲ್ಲಿ ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ

ಮಡಂತ್ಯಾರು: ರೋಟರಿ ಕ್ಲಬ್ ಮಡಂತ್ಯಾರು ಹಾಗೂ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ, ಬಳ್ಳಮಂಜ ಇವರ ಸಂಯುಕ್ತ ಆಶ್ರಯದಲ್ಲಿ ಅರಣ್ಯ ಇಲಾಖೆಯ ಸಹಕಾರದೊಂದಿಗೆ ದೇವಸ್ಥಾನದ ಪರಿಸರದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ವಿವಿಧ ಜಾತಿಯ ಗಿಡಗಳನ್ನು ದೇವಸ್ಥಾನದ ಆವರಣದಲ್ಲಿ ನೆಡುವ ಮೂಲಕ ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣ ನಿರ್ಮಾಣದ ಮಹತ್ವವನ್ನು ಸಾರಲಾಯಿತು. ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ರೋ. ಡಾ. ಹರ್ಷ ಸಂಪಿಗೆತ್ತಾಯ ಅವರ ಮುಂದಾಳತ್ವದಲ್ಲಿ, ರೋಟರಿ ಕ್ಲಬ್ ಮಡಂತ್ಯಾರಿನ ಅಧ್ಯಕ್ಷ ರೋ. ಪ್ರಶಾಂತ್ ಶೆಟ್ಟಿ ಮೂಡಯೂರು ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು.

ವಲಯ ಅರಣ್ಯ ಅಧಿಕಾರಿ ಹಾಗೂ ಮಡಂತ್ಯಾರು ಮತ್ತು ಮಚ್ಚಿನ ಗ್ರಾಮ ಪಂಚಾಯತ್‌ಗಳ ಆಡಳಿತಾಧಿಕಾರಿ ಲೋಕೇಶ್ ಎಸ್. ಎನ್. ಅವರ ನೇತೃತ್ವದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಮಡಂತ್ಯಾರಿನ ಸದಸ್ಯರಾದ ರೋ. ಹರ್ಷ ನಾರಾಯಣ ಶೆಟ್ಟಿ, ರೋ. ಅಶೋಕ್ ಗುಂಡಿಯಲ್ಕೆ, ರೋ. ಜೆರಲ್ಡ್ ಮೀರಾಂದ, ರೋ. ಚಂದ್ರಕಾಂತ್ ನಿಡ್ಡಾಜೆ, ರೋ. ವಿಶ್ವನಾಥ ಶೆಟ್ಟಿ ಹಂಬೆಟ್ಟು, ರೋ. ಅವಿನಾಶ್ ಕುಲಾಲ್ ಬಳ್ಳಮಂಜ, ರೋ. ಸದಾನಂದ ಶೆಟ್ಟಿ ಮಡಪ್ಪಾಡಿ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿಡೊಂಜಿ ದಿನ’

Suddi Udaya

ತೆಕ್ಕಾರು: ಕುಟ್ಟಿಗಳ ಬಜಾರ್ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya

ದಾರುಸ್ಸಲಾಂ ಕ್ಯಾಂಪಸ್ಸ್ ನಲ್ಲಿ ಲೈಬ್ರರಿ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

Suddi Udaya
error: Content is protected !!