July 16, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ಐಆರ್ ಬಗ್ಗೆ ಮತದಾರರಿಗೆ ಇನ್ನಷ್ಟು ಮಾಹಿತಿ ನೀಡಲು ಶನಿವಾರ, ಭಾನುವಾರ ವಿಶೇಷ ಅಭಿಯಾನ : ವಿ.ಅನ್ಬುಕುಮಾ‌ರ್

ಬೆಳ್ತಂಗಡಿ: ರಾಜ್ಯದಲ್ಲಿ ಮತದಾರರ ಪಟ್ಟಿಯ, ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್)ಯ ಪ್ರಮುಖ ಹಂತ ಗಣತಿ ನಮೂನೆಗಳ ವಿತರಣೆ ಕಾರ್ಯ ಬಹುತೇಕ ಮುಕ್ತಾಯದ ಹಂತದಲ್ಲಿದ್ದು ಈಗ ಗಣತಿ ನಮೂನೆಗಳ ಭರ್ತಿಗೆ ಎದುರಾಗುವ ಸಮಸ್ಯೆ, ಗೊಂದಲ ಹಾಗೂ ಮಾಹಿತಿಯ ಕೊರತೆಗೆ ನೆರವು ನೀಡಲು ರಾಜ್ಯಾದ್ಯಂತ ಶನಿವಾರ ಮತ್ತು ರವಿವಾರ ವಿಶೇಷ ಅಭಿಯಾನ ನಡೆಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್‌ ತಿಳಿಸಿದ್ದಾರೆ.

ಜು.15ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗಣತಿ ನಮೂನೆ ಭರ್ತಿ ಮಾಡುವ ಹಂತದಲ್ಲಿ ಮತದಾರರಿಗೆ ಯಾವುದೇ ಸಮಸ್ಯೆ ಅಥವಾ ಗೊಂದಲಗಳು ಉಂಟಾಗದಂತೆ ವ್ಯವಸ್ಥೆ ಮಾಡುವುದು ಚುನಾವಣಾ ಆಯೋಗದ ಆದ್ಯತೆಯಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳನ್ನು ಗುರಿಯಾಗಿಟ್ಟುಕೊಂಡು ಶನಿವಾರ ಮತ್ತು ರವಿವಾರ ವಿಶೇಷ ಅಭಿಯಾನ ನಡೆಸಲಾಗುವುದು ಎಂದರು.

2002ರ ಮತದಾರರ ಪಟ್ಟಿಯಲ್ಲಿ ಮಾಹಿತಿ ಲಭ್ಯವಾಗದಿದ್ದರೂ, ಅಂತವರೂ ಗಣತಿ ನಮೂನೆಗಳನ್ನು ಭರ್ತಿ ಮಾಡಿ, ಫೋಟೋ ಅಂಟಿಸಿ ಬಿಎಲ್‌ಒಗಳಿಗೆ ಕೊಡಬೇಕು. ಅವರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಪ್ರಕಟವಾಗಿರುತ್ತದೆ. ಬಳಿಕ ಇ.ಆರ್. ಒ ಗಳಿಂದ ನೋಟಿಸ್ ಬರುತ್ತದೆ. ಅದಕ್ಕೆ ಚುನಾವಣ ಆಯೋಗ ಗುರುತಿಸಿರುವ 12 ದಾಖಲೆಗಳ ಪೈಕಿ ಯಾವುದಾದರೂ ಒಂದನ್ನು ಸಲ್ಲಿಸಿದರೆ, ನಿಯಮಾನುಸಾರ ಪರಿಶೀಲಿಸಿ ಇ.ಆ‌ರ್.ಒ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

Related posts

ಬಂದಾರು-ಕೊಕ್ಕಡ ಗ್ರಾಮವನ್ನು ಬೆಸೆಯುವ ಮೈಪಾಲ ಸೇತುವೆ ಕಾಮಗಾರಿ ವೀಕ್ಷಿಸಿದ ಶಾಸಕ ಹರೀಶ್ ಪೂಂಜ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಾರ್ಷಿಕ ಕ್ರೀಡಾಕೂಟ

Suddi Udaya

ಅನಘ ಮನೆಯ ಕಳ್ಳತನ ಪ್ರಕರಣ ಶೀಘ್ರವಾಗಿ ಭೇದಿಸುವಂತೆ ವೇಣೂರು ಪೊಲೀಸ್ ಠಾಣೆಗೆ ಕುತ್ಲೂರು ಗ್ರಾಮದ ಮಹಿಳೆಯರಿಂದ ಮನವಿ

Suddi Udaya

ಕಳೆಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆಗುಂಬೆ ವರ್ಗಾವಣೆ ಆದೇಶ ರದ್ದು: ಉಜಿರೆ ಗ್ರಾ.ಪಂ ಪಿಡಿಒ ಆಗಿ ಪಿ.ಹೆಚ್. ಪ್ರಕಾಶ್ ಶೆಟ್ಟಿ ಮುಂದುವರಿಕೆ

Suddi Udaya

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!