25.7 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ಐಆರ್ ಬಗ್ಗೆ ಮತದಾರರಿಗೆ ಇನ್ನಷ್ಟು ಮಾಹಿತಿ ನೀಡಲು ಶನಿವಾರ, ಭಾನುವಾರ ವಿಶೇಷ ಅಭಿಯಾನ : ವಿ.ಅನ್ಬುಕುಮಾ‌ರ್

ಬೆಳ್ತಂಗಡಿ: ರಾಜ್ಯದಲ್ಲಿ ಮತದಾರರ ಪಟ್ಟಿಯ, ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್)ಯ ಪ್ರಮುಖ ಹಂತ ಗಣತಿ ನಮೂನೆಗಳ ವಿತರಣೆ ಕಾರ್ಯ ಬಹುತೇಕ ಮುಕ್ತಾಯದ ಹಂತದಲ್ಲಿದ್ದು ಈಗ ಗಣತಿ ನಮೂನೆಗಳ ಭರ್ತಿಗೆ ಎದುರಾಗುವ ಸಮಸ್ಯೆ, ಗೊಂದಲ ಹಾಗೂ ಮಾಹಿತಿಯ ಕೊರತೆಗೆ ನೆರವು ನೀಡಲು ರಾಜ್ಯಾದ್ಯಂತ ಶನಿವಾರ ಮತ್ತು ರವಿವಾರ ವಿಶೇಷ ಅಭಿಯಾನ ನಡೆಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್‌ ತಿಳಿಸಿದ್ದಾರೆ.

ಜು.15ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗಣತಿ ನಮೂನೆ ಭರ್ತಿ ಮಾಡುವ ಹಂತದಲ್ಲಿ ಮತದಾರರಿಗೆ ಯಾವುದೇ ಸಮಸ್ಯೆ ಅಥವಾ ಗೊಂದಲಗಳು ಉಂಟಾಗದಂತೆ ವ್ಯವಸ್ಥೆ ಮಾಡುವುದು ಚುನಾವಣಾ ಆಯೋಗದ ಆದ್ಯತೆಯಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳನ್ನು ಗುರಿಯಾಗಿಟ್ಟುಕೊಂಡು ಶನಿವಾರ ಮತ್ತು ರವಿವಾರ ವಿಶೇಷ ಅಭಿಯಾನ ನಡೆಸಲಾಗುವುದು ಎಂದರು.

2002ರ ಮತದಾರರ ಪಟ್ಟಿಯಲ್ಲಿ ಮಾಹಿತಿ ಲಭ್ಯವಾಗದಿದ್ದರೂ, ಅಂತವರೂ ಗಣತಿ ನಮೂನೆಗಳನ್ನು ಭರ್ತಿ ಮಾಡಿ, ಫೋಟೋ ಅಂಟಿಸಿ ಬಿಎಲ್‌ಒಗಳಿಗೆ ಕೊಡಬೇಕು. ಅವರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಪ್ರಕಟವಾಗಿರುತ್ತದೆ. ಬಳಿಕ ಇ.ಆರ್. ಒ ಗಳಿಂದ ನೋಟಿಸ್ ಬರುತ್ತದೆ. ಅದಕ್ಕೆ ಚುನಾವಣ ಆಯೋಗ ಗುರುತಿಸಿರುವ 12 ದಾಖಲೆಗಳ ಪೈಕಿ ಯಾವುದಾದರೂ ಒಂದನ್ನು ಸಲ್ಲಿಸಿದರೆ, ನಿಯಮಾನುಸಾರ ಪರಿಶೀಲಿಸಿ ಇ.ಆ‌ರ್.ಒ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

Related posts

ಕಸ್ತೂರಿ ರಂಗನ್ ವರದಿ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಂಪೂರ್ಣ ಬೆಂಬಲ

Suddi Udaya

ಬೆಳಾಲು: ಮಾಚಾರು ನಿವಾಸಿ ಸುಂದರ ಮಡಿವಾಳ ನಿಧನ

Suddi Udaya

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya

ನಿಡ್ಲೆ–ಕಾಟ್ಲಾದಲ್ಲಿ ಏರ್‌ಟೆಲ್ ಟವರ್ ಸಮಸ್ಯೆ: 2–3 ವರ್ಷಗಳಿಂದ ಸಂಕಷ್ಟದಲ್ಲಿರುವ ಗ್ರಾಮಸ್ಥರು

Suddi Udaya

ಗೇರುಕಟ್ಟೆ: ಹಲೇಜಿ -ಕಲಾಯಿ ಸಂಪರ್ಕ ರಸ್ತೆಯ ಚೆಕ್ ಡ್ಯಾಮ್ ನಲ್ಲಿ ತುಂಬಿಕೊಂಡ ಮರದ ದಿಮ್ಮಿಗಳ ತೆರವು

Suddi Udaya

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರವರಿಗೆ ಸ್ವಾಗತ ಕೋರಿ ಬ್ಯಾನರ್ ಅಳವಡಿಕೆ : ಬ್ಯಾನರ್ ತೆರವು ಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya
error: Content is protected !!