July 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್‌ಐಆ‌ರ್ ವೇಳಾಪಟ್ಟಿ ಪರಿಷ್ಕರಣೆ: ಆ.8ರ ತನಕ ವಿಸ್ತರಣೆ

ಬೆಳ್ತಂಗಡಿ: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವೇಳಾಪಟ್ಟಿ ಯನ್ನು ಪರಿಷ್ಕರಿಸಲಾಗಿದ್ದು, ಜು. 29ರ ಬದಲು ಗಣತಿ ನಮೂನೆಗಳನ್ನು ತುಂಬಲು ಆ. 8ರವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಅವರು ಜು. 14ರಂದು ಬರೆದ ಪತ್ರ ಪರಿಗಣಿಸಿ ಭಾರತ ಚುನಾವಣಾ ಆಯೋಗವು ಎಸ್‌ಐಆರ್‌ ವೇಳಾಪಟ್ಟಿ ಪರಿಷ್ಕರಿಸಿದೆ. ಅದರಂತೆ ಗಣತಿ ನಮೂನೆಗಳ ಭರ್ತಿಗೆ 10 ದಿನ, ಕರಡು ಮತದಾರರ ಪಟ್ಟಿ ಪ್ರಕಟನೆಗೆ 12 ದಿನ, ಆಕ್ಷೇಪಣೆ ಸಲ್ಲಿಸಲು 7, ನೋಟಿಸ್ ಹಂತ, ದೂರು, ಆಕ್ಷೇಪಣೆಗಳ ವಿಲೇವಾರಿಗೆ 12 ದಿನ, ಅಂತಿಮ ಮತದಾರರ ಪಟ್ಟಿ ಪ್ರಕಟನೆಗೆ 12ದಿನ ವಿಸ್ತರಣೆ ಆಗಲಿದೆ. ಈ ಹಿಂದೆ ಗಣತಿ ನಮೂನೆಗಳ ವಿತರಣೆಗೆ ಬಿಎಲ್‌ಒಗಳ ಭೇಟಿಗೆ ಜುಲೈ 29 ಕೊನೆ ದಿನವಾಗಿತ್ತು, ಈಗ ಆಗಸ್ಟ್ 8ರವರೆಗೆ ಅವಕಾಶ ಇರಲಿದೆ. ಕರಡು ಮತದಾರರ ಪಟ್ಟಿ ಪ್ರಕಟಣೆ ಆ.5ರ ಬದಲು ಆ.17ಕ್ಕೆ ಆಗಲಿದೆ. ದೂರು, ಆಕ್ಷೇಪಣೆಗಳ ಸಲ್ಲಿಕೆ ಅವಧಿಯನ್ನು ಆಗಸ್ಟ್ 8ರಿಂದ ಸೆ.9ಕ್ಕೆ ಇದ್ದದ್ದನ್ನು ಆಗಸ್ಟ್ 17ರಿಂದ ಸೆ.16 ರವರೆಗೆ ವಿಸ್ತರಿಸಲಾಗಿದೆ.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಂದ ಬೆಂಬಲ

Suddi Udaya

ಉಳ್ತೂರು: ದರ್ಸ್ ವಾರ್ಷಿಕ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಉದ್ಯಮಿ ಕಿರಣಚಂದ್ರ ಪುಷ್ಪಗಿರಿ ಭೇಟಿ

Suddi Udaya

ಸುಲ್ಕೇರಿ ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಗ್ರಾ.ಪಂ. ಆಶ್ರಯದಲ್ಲಿ ಆಟಿಡೊಂಜಿ ದಿನ

Suddi Udaya

ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿ, ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 50 ಲಕ್ಷ ಮತ್ತು ಸವಣಾಲು ಶ್ರೀ ಆದಿನಾಥ ಸ್ವಾಮಿ ಬಸದಿ, ಜೀರ್ಣೋದ್ಧಾರಕ್ಕೆ 9 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ಭೇಟಿ: ಡೆಂಗ್ಯೂ ಹೆಚ್ಚಾಗುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿ ಜೊತೆ ಸಭೆ

Suddi Udaya
error: Content is protected !!