26.5 C
ಪುತ್ತೂರು, ಬೆಳ್ತಂಗಡಿ
July 16, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ “ಶ್ರೀ ಮಂಜುನಾಥ ಬನ್ನಿಸ್ ಟಂಟೋಲ”ಕ್ಕೆ ಚಾಲನೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ “ಶ್ರೀ ಮಂಜುನಾಥ ಬನ್ನಿಸ್ ಟಂಟೋಲ” ಘಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ. ಆರ್. ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು. ಅವರು ಮಕ್ಕಳಿಗೆ ಬನ್ನಿಸ್ ಎಪ್ರೋನ್ ಧರಿಸುವ ಮೂಲಕ ಘಟಕವನ್ನು ಉದ್ಘಾಟಿಸಿ, ಮಕ್ಕಳಲ್ಲಿ ಶಿಸ್ತು, ಸೇವಾ ಮನೋಭಾವ, ನಾಯಕತ್ವ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸುವ ಉದ್ದೇಶವನ್ನು ತಿಳಿಸಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಬೆಳ್ತಂಗಡಿಯ ಕಾರ್ಯದರ್ಶಿಯಾದ ಶ್ರೀಮತಿ ಪ್ರಮೀಳಾ ಪೂಜಾರಿ ಅವರ ನೇತೃತ್ವದಲ್ಲಿ ಮಕ್ಕಳಿಗೆ ವಿವಿಧ ಬನ್ನಿಸ್ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

Suddi Udaya

ಶಿಶಿಲದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಬಂಡಿಹೊಳೆ ಕೆಮ್ಮಣ್ಣು ಎಂಬಲ್ಲಿ ಬರೆ ಜರಿದು ರಸ್ತೆ ಬಂದ್

Suddi Udaya

ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರ

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಇಂದಬೆಟ್ಟು: ಕೃಷಿ ಮತ್ತು ಕುಡಿಯುವ ನೀರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವ ಬಗ್ಗೆ ಮೆಸ್ಕಾಂ ಅಧಿಕಾರಿಗೆ ಗ್ರಾಮಸ್ಥರಿಂದ ಮನವಿ

Suddi Udaya
error: Content is protected !!