September 1, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ “ಶ್ರೀ ಮಂಜುನಾಥ ಬನ್ನಿಸ್ ಟಂಟೋಲ”ಕ್ಕೆ ಚಾಲನೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ “ಶ್ರೀ ಮಂಜುನಾಥ ಬನ್ನಿಸ್ ಟಂಟೋಲ” ಘಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ. ಆರ್. ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು. ಅವರು ಮಕ್ಕಳಿಗೆ ಬನ್ನಿಸ್ ಎಪ್ರೋನ್ ಧರಿಸುವ ಮೂಲಕ ಘಟಕವನ್ನು ಉದ್ಘಾಟಿಸಿ, ಮಕ್ಕಳಲ್ಲಿ ಶಿಸ್ತು, ಸೇವಾ ಮನೋಭಾವ, ನಾಯಕತ್ವ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸುವ ಉದ್ದೇಶವನ್ನು ತಿಳಿಸಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಬೆಳ್ತಂಗಡಿಯ ಕಾರ್ಯದರ್ಶಿಯಾದ ಶ್ರೀಮತಿ ಪ್ರಮೀಳಾ ಪೂಜಾರಿ ಅವರ ನೇತೃತ್ವದಲ್ಲಿ ಮಕ್ಕಳಿಗೆ ವಿವಿಧ ಬನ್ನಿಸ್ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕಳೆಂಜ: ರಸ್ತೆಗೆ ಅಡ್ಡಲಾಗಿ ಬಿದ್ದ ವಿದ್ಯುತ್ ಕಂಬ ಹಾಗೂ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ” ಗೌರವ ಪುರಸ್ಕಾರ ಪ್ರಧಾನ ಮಾಡಿ ಆಶೀರ್ವದಿಸಿದ ಯತಿ ವರೇಣ್ಯರು

Suddi Udaya
error: Content is protected !!