July 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೈನಾಡು ಶ್ರೀ ರಾಮ ಯುವಕ ಸಂಘ ದವರು ನೀಡಿದ ಸ್ಥಳದಲ್ಲಿ ನೂತನ ಅಂಗನವಾಡಿ ಕಟ್ಟಡ ಶುಭಾರಂಭ

ಪಿಲಾತಬೆಟ್ಟು : ಶ್ರೀ ರಾಮ ಯುವಕ ಸಂಘ ದ ವತಿಯಿಂದ ನೀಡಲ್ಪಟ್ಟ ಹೊಸ ಜಾಗದಲ್ಲಿ ಬಂಟ್ವಾಳ ಶಾಸಕರ ಹಾಗೂ ಪಿಲಾತಬೆಟ್ಟು ಗ್ರಾಮ ಪಂಚಾಯತ್ ಅನುದಾನ ದಿಂದ ನಿರ್ಮಾಣ ಮಾಡಿದ ನೂತನ ಅಂಗನವಾಡಿ ಕಟ್ಟಡವು ಗಣಹೋಮ ದೊಂದಿಗೆ ಶುಭಾರಂಭಗೊಂಡಿತು.

ಕಳೆದ ಮಳೆಗಾಲದ ಸಮಯದಲ್ಲಿ ಹಳೆಯ ಅಂಗನವಾಡಿ ಕಟ್ಟಡ ವು ಶಿಥಿಲಗೊಂಡಿದ್ದು, ನಂತರದ ದಿನಗಳಲ್ಲಿ ಅಂಗನವಾಡಿಯನ್ನು ತಾತ್ಕಾಲಿಕವಾಗಿ ಹತ್ತಿರದ ಶ್ರೀ ರಾಮ ಭಜನಾ ಮಂದಿರ ದ ಸಭಾ ಭವನದಲ್ಲಿ ನಡೆಸಲಾಗುತ್ತಿತ್ತು.
ಇವತ್ತು ಬೆಳಿಗ್ಗೆ ಅಂಗನವಾಡಿ ಸಹಾಯಕಿಯರು, ನೇತ್ರಾವತಿ ಸ್ತ್ರೀ ಶಕ್ತಿ ಸಂಘದ ಸದಸ್ಯರು, ಶ್ರೀ ದುರ್ಗಾ ಸ್ತ್ರೀ ಶಕ್ತಿ ಸಂಘದ ಸದಸ್ಯರು, ಶ್ರೀ ರಾಮ ಭಜನಾ ಮಂದಿರ, ಶ್ರೀ ರಾಮ ಯುವಕ ಸಂಘ, ನಿವೇದಿತಾ ಮಾತೃ ಮಂಡಳಿ , ಪಿಲಾತಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು ಗಳ ಸಹಯೋಗದಲ್ಲಿ ಗಣಹೋಮ ದೊಂದಿಗೆ ಶುಭಾರಂಭಗೊಂಡಿತು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಯಂ ತುಂಗಪ್ಪ ಬಂಗೇರ, ಪಂಚಾಯತ್ ಸದಸ್ಯರಾದ ಲಕ್ಷ್ಮೀ ನಾರಾಯಣ ಹೆಗ್ಡೆ, ಶ್ರೀಮತಿ ಶಾರದಾ, ಶ್ರೀಮತಿ ಹರ್ಷಿಣಿ ಪುಷ್ಪಾನಂದ, ಶ್ರೀಮತಿ ಲೀಲಾವತಿ ಕೆರೆ ಕೋಡಿ, ನೆಲ್ವಿಸ್ಟರ್ ಪಿಂಟೋ ಹಾಗೂ ಪಿ. ಪ್ರಾ. ಕೃ.ಪ. ಸ. ಸಂಘದ ನಿರ್ದೇಶಕರಾದ ಸರೋಜಾ ಧರ್ಣಪ್ಪ ಶೆಟ್ಟಿ, ಬಂಟ್ವಾಳ ತಾಲೂಕು ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಶೋಭಾ, ಅಂಗನವಾಡಿ ಶಿಕ್ಷಕಿ ಅನಿತಾ ಕ್ರಾಸ್ತಾ ನೈನಾಡು, ಪ್ರಭಾರ ಶಿಕ್ಷಕಿ ಶ್ರೀಮತಿ ಶಾಂತಲಾ ಮೂರ್ಜೆ , ಸಹಾಯಕಿ ಶ್ರೀಮತಿ ಪದ್ಮಾವತಿ ಅಂಜಾರು, ಪಿಲಾತಬೆಟ್ಟು ಗ್ರಾಮ ಪಂಚಾಯತ್ ನ ಶ್ರೀಮತಿ ಜಯಂತಿ, ಶೀನ , ಅಂಗನವಾಡಿ ಪೋಷಕ ತಂಡದ ಅಧ್ಯಕ್ಷೆ ಶ್ರೀಮತಿ ಅನೂಷ ರಮೇಶ್ ನೈನಾಡು, ಮಾತೃ ಮಂಡಳಿ ಅಧ್ಯಕ್ಷೆ ಜಯಶೀಲಾ ಚಂದ್ರಶೇಖರ್ ಅಚ್ಚಿನಡ್ಕ , ಆಶಾ ಕಾರ್ಯಕರ್ತೆ ಪ್ರಮೀಳಾ , ಕಂಟ್ರಾಕ್ಟರ್ ಪುಷ್ಪಾನಂದ ಮೂರ್ಜೆ ಮತ್ತಿತರರು ಉಪಸ್ಥಿತರಿದ್ದರು.

ಶ್ರೀ ರಾಮ ಭಜನಾ ಮಂದಿರ ನೈನಾಡು ವತಿಯಿಂದ ಗಣಹೋಮದ ವ್ಯವಸ್ಥೆ ಮಾಡಲಾಗಿದ್ದು, ಶ್ರೀ ದುರ್ಗಾ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯರುಗಳು ಅಂಗನವಾಡಿ ಮಕ್ಕಳಿಗೆ ಸಮವಸ್ತ್ರದ ವ್ಯವಸ್ಥೆ ಮಾಡಿದ್ದರು. ನೇತ್ರಾವತಿ ಸ್ತ್ರೀ ಶಕ್ತಿ ಸಂಘದ ಸದಸ್ಯರು ಉಪಹಾರ ದ ವ್ಯವಸ್ಥೆ ಮಾಡಿದ್ದರು.

Related posts

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಡಳಿತ ಮಂಡಳಿಯ ಸೌಹಾರ್ದ ಸಭೆ ನಡೆದಿಲ್ಲ

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ :ಮೈರೋಳ್ತಡ್ಕದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ಮತ್ತು ಮದುಮಗಳ ಶೃಂಗಾರ -ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ

Suddi Udaya

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya
error: Content is protected !!