28.8 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ ಪಲ್ಗುಣಿ ನದಿ ಪರಿಸರದಲ್ಲಿ ನೀರು ನಾಯಿ

ಗರ್ಡಾಡಿ ಗ್ರಾಮದ ಕುಬಳಬೆಟ್ಟು ಗುತ್ತು ಪರಿಸರದ ಪಲ್ಗುಣಿ ನದಿ ತಟದ ಹಳ್ಳದಲ್ಲಿ ಕಳೆದ ಕೆಲವು ದಿನಗಳಿಂದ ನೀರು ನಾಯಿಗಳು ಕಂಡು ಬರುತ್ತಿವೆ.

ಇಲ್ಲಿನ ಕೆ. ಸಂಪತ್ ಕುಮಾರ್ ಕೊಂಬ ಎಂಬವರ ಮನೆಯ ಸಮೀಪ ಕೃಷಿ ತೋಟದಲ್ಲಿ ಹರಿಯುವ ಹಳ್ಳದಲ್ಲಿ ಆಗಾಗ ನೀರು ನಾಯಿಗಳು ಕಂಡು ಬರುತ್ತಿವೆ. ಈ ಹಿಂದಿನ ವರ್ಷಗಳಲ್ಲೂ ಈ ಸ್ಥಳದಲ್ಲಿ ನೀರು ನಾಯಿಗಳು ಕಂಡುಬಂದಿದ್ದವು.
ಸಮೀಪದಲ್ಲಿ ಹರಿಯುವ ಪಲ್ಗುಣಿ ನದಿಯನ್ನು ಸೇರುವ ಈ ಹಳ್ಳದಲ್ಲಿ ಸುಮಾರು ಹತ್ತಕ್ಕಿಂತ ಅಧಿಕ ನೀರು ನಾಯಿ ಮರಿಗಳು ಆಗಾಗ ಆಟ ಆಡುವುದು ಕಂಡುಬರುತ್ತಿದೆ. ಆದರೆ ದೊಡ್ಡ ನೀರು ನಾಯಿಗಳು ಹಳ್ಳದಲ್ಲಿ ಬರುವುದು ತೀರಾ ಅಪರೂಪ. ಪಲ್ಗುಣಿ ನದಿ ತಟದಲ್ಲಿ ಸುಮಾರು 25ಕ್ಕಿಂತ ಅಧಿಕ ನೀರು ನಾಯಿಗಳು ಇರುವ ಶಂಕೆ ವ್ಯಕ್ತವಾಗಿದೆ.

ನೀರು ನಾಯಿ ಸಂತತಿ ಅಳಿವಿನಂಚಿನಲ್ಲಿದೆ. ಪಲ್ಗುಣಿ ನದಿ ಪ್ರದೇಶದ ಕುಬಳಬೆಟ್ಟು ಪರಿಸರದಲ್ಲಿ ಮಾತ್ರ ಹೆಚ್ಚಾಗಿ ಇವು ಕಂಡುಬರುತ್ತಿವೆ.

ಪಲ್ಗುಣಿ ನದಿ ಪ್ರದೇಶದ ಈ ಪರಿಸರದಲ್ಲಿ ಜನರು ಪ್ರಸ್ತುತ ನದಿಯತ್ತ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಈ ಬಾರಿ ಮಳೆ ಪ್ರಮಾಣ ತೀವ್ರ ಕಡಿಮೆ ಇದ್ದು ನದಿಯಲ್ಲಿ ನೀರಿನ ಹರಿವು ಕಡಿಮೆ ಇದೆ. ಈ ಕಾರಣದಿಂದ ನೀರು ನಾಯಿಗಳು ಆಗಾಗ ಆಹಾರ ಅರಸಿಕೊಂಡು ಹಳ್ಳದತ್ತ ಬರುತ್ತಿವೆ.

Related posts

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆ

Suddi Udaya

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಬೆಳ್ತಂಗಡಿ: ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮೂವರು ಕಲಾಸಾಧಕರಿಗೆ ರಂಗ ಸಮ್ಮಾನ್ ಗೌರವ

Suddi Udaya

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

Suddi Udaya
error: Content is protected !!