28.8 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ಕಾವ್ಯ ವಾಚನ-ಪ್ರವಚನ ಉದ್ಘಾಟನೆ


ಉಜಿರೆ: ಜ್ಞಾನ ದಾಸೋಹದಿಂದ ಆತ್ಮನ ಸಾಕ್ಷಾತ್ಕಾರವಾಗಿ ಭಗವಂತನ ಸಾನ್ನಿಧ್ಯದೊಂದಿಗೆ ಶಾಶ್ವತ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಕನ್ಯಾಡಿ ರಾಮಕ್ಷೇತ್ರದ ಪೀಠಾಧಿಪತಿಗಳಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ಅವರು ಜು.16 ರಂದು ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ 55ನೇ ವರ್ಷದ ಪುರಾಣ-ಕಾವ್ಯ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪುರಾಣ ಕಾವ್ಯ ವಾಚನ- ಪ್ರವಚನ ಅಮೂಲ್ಯ ಜ್ಞಾನಸತ್ರವಾಗಿದ್ದು, ಶ್ರೋತೃಗಳು ಆಧ್ಯಾತ್ಮದಲ್ಲಿ  ತೊಡಗಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ. ದೇಹ ನಶ್ವರ ಹಾಗೂ ಆತ್ಮ ಶಾಶ್ವತವಾಗಿದ್ದು ನಮ್ಮ ಕರ್ತವ್ಯ ಮತ್ತು ಕರ್ಮವನ್ನು ಪ್ರಾಮಾಣಿಕವಾಗಿ ನಿಷ್ಠೆಯಿಂದ ಮಾಡಬೇಕು. ಜ್ಞಾನಯೋಗ ಮತ್ತು ಕರ್ಮಯೋಗದಿಂದ ಮಾತ್ರ ಶಾಶ್ವತ ಸುಖವನ್ನೀಯುವ ಮೋಕ್ಷ ಪ್ರಾಪ್ತಿಯಾಗುತ್ತದೆ. ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಅರಿಷಡ್ವರ್ಗಗಳನ್ನು ಗೆಲ್ಲಬೇಕು. ಆಗ ಮಾತ್ರ ಶ್ರದ್ಧಾ-ಭಕ್ತಯಿಂದ ಧರ್ಮದ ಮರ್ಮವನ್ನರಿತು ಸುಖ-ಶಾಂತಿ, ನೆಮ್ಮದಿ ಪಡೆಯಬಹುದು. “ಸಮ್ಯಕ್‌ದರ್ಶನ, ಜ್ಞಾನ, ಚಾರಿತ್ರಾಣಿ ಮೋಕ್ಷ ಮಾರ್ಗಃ” ಅಂದರೆ ರತ್ನತ್ರಯ ಧರ್ಮದ ಪಾಲನೆಯಿಂದ ಶಾಶ್ವತ ಸುಖ ಪಡೆಯಬಹುದು ಎಂಬ ಜೈನಧರ್ಮದ ಸಾರವನ್ನು ಸ್ವಾಮೀಜಿ ವಿಶೇಷವಾಗಿ ಉಲ್ಲೇಖಿಸಿದರು.

ಸಮಯ ಅಮೂಲ್ಯವಾಗಿದೆ, ಸದುಪಯೋಗ ಮಾಡಿ: ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಸಮಯ ಅಮೂಲ್ಯವಾಗಿದ್ದು ಅದರ ಸದುಪಯೋಗ ಮಾಡಬೇಕು. ಎಲ್ಲರಿಗೂ ಕಾಲಪ್ರಜ್ಞೆ ಇರಬೇಕು. ಧರ್ಮದ ಮರ್ಮವನ್ನರಿತು ಅನುಷ್ಠಾನ ಮಾಡಿದರೆ ಜೀವನ ಪಾವನವಾಗುತ್ತದೆ. ಧರ್ಮದಿಂದ ವಿಮುಖರಾದರೆ ಸರ್ವನಾಶವಾಗುತ್ತದೆ. ಪುರಾಣ ಕಾವ್ಯ ವಾಚನ-ಪ್ರವಚನದ ಮೂಲಕ ಸಮಯದ ಸದ್ವಿನಿಯೋಗ ಮಾಡಿಕೊಳ್ಳಿ ಎಂದು ಹೆಗ್ಗಡೆಯವರು ಸಲಹೆ ನೀಡಿದರು.
ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಸ್ವಾಗತಿಸಿದರು. ಶ್ರೀನಿವಾಸ ರಾವ್ ಧರ್ಮಸ್ಥಳ ಧನ್ಯವಾದವಿತ್ತರು.

Related posts

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ : ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರಾಗಿ ಗೋಪಾಲ ಅಧಿಕಾರ ಸ್ವೀಕಾರ

Suddi Udaya

ಬಾಯ೯ ಬಿಜೆಪಿ ಸ್ಪಂದನ ಸಮಿತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ

Suddi Udaya

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

Suddi Udaya

ಉಜಿರೆ ಎಸ್.ಡಿ.ಎಮ್ ನಲ್ಲಿ “ಆಧುನಿಕ ಉದ್ಯೋಗ ಮಾರುಕಟ್ಟೆಯಲ್ಲಿ ಉದ್ಯೋಗಾರ್ಹತಾ ಕೌಶಲ್ಯ ಮತ್ತು ಅವಕಾಶಗಳ ವಾಸ್ತವತೆ” ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ನಾರಾವಿಯ ಶರತ್ ಭಾರತೀಯ ಸೇನೆಯ ಅಗ್ನಿವೀರ್ ಹುದ್ದೆಗೆ ಆಯ್ಕೆ

Suddi Udaya
error: Content is protected !!