24.4 C
ಪುತ್ತೂರು, ಬೆಳ್ತಂಗಡಿ
July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಕಚೇರಿಯ ಎಂ. ಮೃತ್ಯುಂಜಯ, ಕೊರಗಪ್ಪ ಹೆಗ್ಡೆ, ಅನಿತಾ ಶಿಂಗಾಯಿ ಉಪ ತಹಸೀಲ್ದಾರ್ ಆಗಿ ಭಡ್ತಿ

ಬೆಳ್ತಂಗಡಿ : ಮೈಸೂರು ವಿಭಾಗದಲ್ಲಿ ಖಾಲಿವಿರುವ ಉಪ ತಹಸೀಲ್ದಾರ್ ವೃಂದದ ಹುದ್ದೆಗಳಿಗೆ ಪ್ರಥಮ ದರ್ಜೆ ಸಹಾಯಕರನ್ನು ಮುಂಭಡ್ತಿ ನೀಡಿ ಸ್ಥಳ ನಿಯುಕ್ತಿಗೊಳಿಸಿ ಸರಕಾರ ಆದೇಶಿಸಿದೆ.

ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕರಾದ ಎಂ. ಮೃತ್ಯುಂಜಯ ಅವರನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಚುನಾವಣೆ ಶಾಖೆಯ ಶಿರಸ್ತೇದಾರ್ ಆಗಿ ಮುಂಭಡ್ತಿ ಮಾಡಲಾಗಿದೆ. ಕೆಪಿಎಸ್ ಸಿ ಪರಿಕ್ಷೇಯಲ್ಲಿ ತೆರ್ಗೇಡೆ ಹೊಂದಿ ಕಳೆದ 7 ವರ್ಷಗಳಿಂದ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಮೂಲತ ದಾವಣಗೆರೆ ಜಿಲ್ಲೆಯವರು.

ತಾಲೂಕು ಚುನಾವಣಾ ಶಾಖೆಯ ಪ್ರ. ದ. ಸಹಾಯಕರಾಗಿದ್ದ ಕೊರಗಪ್ಪ ಹೆಗ್ಡೆ ಅವರನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಉಪ ತಹಶೀಲ್ದಾರ್ ಆಗಿ ಬಣಕಲ್ ನಾಡಕಛೇರಿಗೆ ಸ್ಥಳ ನಿಯುಕ್ತಿಗೊಳಿಸಲಾಗಿದೆ. ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಕಳೆದ ಮೂರು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಅವರು ಮೂಲತ ಬೆಳ್ತಂಗಡಿಯವರು.

ತಾಲೂಕು ಕಚೇರಿಯ ಪ್ರ. ದ. ಸಹಾಯಕಿ ಅನಿತಾ ಶಿಂಗಾಯಿ ಅವರನ್ನು ಸುಳ್ಯ ತಾಲೂಕಿನ ತಾಲೂಕು ಕಚೇರಿಯ ಸಾಮಾಜಿಕ ಭಧ್ರತಾ ಶಾಖೆಗೆ ಮುಂಭಡ್ತಿ ಮಾಡಲಾಗಿದೆ. ಕೆಪಿಎಸ್ ಸಿ ಪರಿಕ್ಷೇಯಲ್ಲಿ ತೆರ್ಗೇಡೆ ಹೊಂದಿ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ವೃತ್ತಿ ಜೀವನ ಆರಂಭಿಸಿದ ಅವರು ಕಳೆದ 7 ವರ್ಷಗಳಿಂದ ಬೆಳ್ತಂಗಡಿಯಲ್ಲಿ ಸೇವೆ ಸಲ್ಲಿಸಿದ ಇವರು ಮೂಲತ ಬೆಳಾಗಾವಿ ಜಿಲ್ಲೆಯವರು.

Related posts

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಬಯಲು ; ಬೆಳ್ತಂಗಡಿ ಪೊಲೀಸರಿಂದ ದಾಳಿ: ಪ್ರಕರಣ ದಾಖಲು

Suddi Udaya

ಉಪ ವಲಯ ಅರಣ್ಯಾಧಿಕಾರಿ ಉಜಿರೆಯ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ

Suddi Udaya

ಉಜಿರೆಯಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ನ 9ನೇ ಸ್ವಚ್ಛ ಭಾರತ್ ಸ್ವಚ್ಛತಾ ಕಾರ್ಯಕ್ರಮ: ಮುಂದಿನ ಪೀಳಿಗೆಗೆ ಅತ್ಯುತ್ತಮ ಕೊಡುಗೆ ಎಂದರೆ ಸ್ವಚ್ಛ ಪರಿಸರ ಮಾತ್ರ: ಡಾ. ಎಸ್.ಆರ್. ಹರೀಶ್ ಆಚಾರ್ಯ

Suddi Udaya

ಜೂ.30: ಬೆಳ್ತಂಗಡಿ ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಕಛೇರಿ ಉದ್ಘಾಟನೆ

Suddi Udaya

ಉಜಿರೆ : ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ

Suddi Udaya
error: Content is protected !!