24.4 C
ಪುತ್ತೂರು, ಬೆಳ್ತಂಗಡಿ
July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ವರ್ಗಾವಣೆ: ಬೆಳ್ತಂಗಡಿ ಆರ್ ಎಫ್ ಓ ಆಗಿ ಮಹೇಶ್ ದೇವಾಡಿಗ ಅಧಿಕಾರ ಸ್ವೀಕಾರ

ಬೆಳ್ತಂಗಡಿ : ಮಂಗಳೂರು ವಿಭಾಗದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿದ್ದ ತ್ಯಾಗರಾಜ್ ಅವರನ್ನು ಬೆಂಗಳೂರು ಗ್ರೇಟರ್ ಪ್ರಾಧಿಕಾರ (ಕೇಂದ್ರ ವಲಯ) ಕ್ಕೆ ವರ್ಗಾವಣೆ ಮಾಡಲಾಗಿದ್ದು. ತೆರವಾದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಸ್ಥಾನಕ್ಕೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ವಿಭಾಗದ ಕ್ಯಾದಗಿ ವಲಯ ಅರಣ್ಯಾಧಿಕಾರಿ ಮಹೇಶ್ ಎಂ ದೇವಾಡಿಗ ಅವರನ್ನು ನೇಮಕ ಮಾಡಿ ಬೆಂಗಳೂರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೇ.28 ರಂದು ಆದೇಶ ಹೊರಡಿಸಿದ್ದರು.

ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿದ್ದ ಟಿ. ಎನ್. ತ್ಯಾಗರಾಜ್ ಅವರು 2024 ಆಗಷ್ಟ್ 21ರಿಂದ  ಬೆಳ್ತಂಗಡಿ ಆರ್ ಎಫ್ ಓ ಆಗಿ ಕರ್ತವ್ಯ ಸೇವೆ ಸಲ್ಲಿಸಿದ್ದ ಜನಸ್ನೇಹಿ ಅಧಿಕಾರಿಯಾಗಿದ್ದರು.

ಪ್ರಸ್ತುತ ವಲಯ  ಅರಣ್ಯಾಧಿಕಾರಿ ಮಹೇಶ್ ಎಂ. ದೇವಾಡಿಗ ಅವರು ಜು.16 ರಂದು ಅಧಿಕಾರ ಸ್ವೀಕಾರಿಸಿಕೊಂಡಿದ್ದಾರೆ. ಇವರು ಸುಬ್ರಹ್ಮಣ್ಯದ ನೆಟ್ಟಣ ಡಿಪ್ಪೋ, ಚಿಕ್ಕಮಗಳೂರು, ಮೂಡಿಗೆರೆ, ಸಿದ್ದಾಪುರ ವಲಯದಲ್ಲಿ ಸೇವೆ ಸಲ್ಲಿಸಿದ್ದಾರೆ.

Related posts

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ಫಲಿತಾಂಶ: ಶ್ರೀಧ.ಮ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಆ.8: ಅಡಿಕೆ ಕೃಷಿ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಉಜಿರೆ  : ಎಸ್.ಡಿ.ಎಂ ಪ.ಪೂ. ವಸತಿ ಕಾಲೇಜಿನಲ್ಲಿ ‘ಕಾರ್ಗಿಲ್ ವಿಜಯ ದಿವಸ ಆಚರಣೆ’

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

Suddi Udaya
error: Content is protected !!