July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ. ಮಂ.ಪದವಿ ಪೂರ್ವ ಕಾಲೇಜಿನಲ್ಲಿ “ಭಿತ್ತಿಪತ್ರಿಕೆ ಅನಾವರಣ”

ಉಜಿರೆ : “ಪ್ರತಿಭೆಗಳನ್ನು ಬಳಸಲು ಅವಕಾಶ ಸಿಕ್ಕಿದಾಗ ಅದನ್ನು ಸರಿಯಾಗಿ ಬಳಸಿಕೊಂಡು ಬೆಳೆಸಿಕೊಂಡರೆ ಅದ್ಭುತ ಅವಕಾಶದ ಬಾಗಿಲು ತೆರೆದುಕೊಳ್ಳುತ್ತದೆ. ಭಿತ್ತಿ ಪತ್ರಿಕೆಗಳ ಜೊತೆ ನೀವು ಇಷ್ಟ ಪಟ್ಟು ತೊಡಗಿಸಿಕೊಂಡರೆ ಮುಂದೆ ಕಲೆ ಮತ್ತು ಬರವಣಿಗೆಯ ಮಾಧ್ಯಮದಲ್ಲಿ ಅದೇ ನಿಮ್ಮನ್ನು ಬೆಳೆಸುತ್ತದೆ. ಭಿತ್ತಿ ಪತ್ರಿಕೆಗಳು ಆಕರ್ಷಕವಾಗಿ ಮಾತ್ರವಲ್ಲದೆ ಸ್ವಂತಿಕೆ ಮತ್ತು ಸೃಜನಾತ್ಮಕ ತೆಯಿಂದ ಕೂಡಿರಲಿ” ಎಂದು ಶ್ರೀ ಧ. ಮಂ. ಕಾಲೇಜು ( ಸ್ವಾಯತ್ತ ) ಉಜಿರೆ ಇಲ್ಲಿನ ಪತ್ರಿಕೋದ್ಯಮ ವಿಭಾಗದ ವಿಶ್ರಾಂತ ಮುಖ್ಯಸ್ಥ ಪ್ರಸ್ತುತ “ಮಂಜುವಾಣಿ” ಪತ್ರಿಕೆಯ ಸಂಪಾದಕರ ಡಾ. ಭಾಸ್ಕರ ಹೆಗಡೆ ಅವರು ತಿಳಿಸಿದರು.

ಅವರು ಇತ್ತೀಚೆಗೆ ಶ್ರೀ ಧ. ಮಂ. ಪದವಿ ಪೂರ್ವ ಕಾಲೇಜು, ಉಜಿರೆಯಲ್ಲಿ ” ಭಿತ್ತಿಪತ್ರಿಕೆ ಅನಾವರಣ ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾದ, ಮಾಹಿತಿಪೂರ್ಣವಾದ ಸಂಗತಿಗಳನ್ನು ಮತ್ತು ತಮ್ಮ ಅನುಭವಕ್ಕೆ ಬಂದ ವಿದ್ಯಾರ್ಥಿ ಸಾಧಕರ ಬಗ್ಗೆ ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲರ ಪ್ರಮೋದ್ ಕುಮಾರ್ ಬಿ. ಪ್ರಾಸ್ತಾವಿಕವಾಗಿ ಮಾತನಾಡುತ್ತಾ “ಒಳ್ಳೆಯ ಭಾವನೆಗಳನ್ನು, ವಿಚಾರಗಳನ್ನು, ಅನಿಸಿಕೆಗಳನ್ನು ಪ್ರಕಟಿಸಲು ಭಿತ್ತಿ ಪತ್ರಿಕೆಯನ್ನು ವೇದಿಕೆಯಾಗಿ ಬಳಸಿಕೊಳ್ಳಿ. ಆ ಮೂಲಕ ನಿಮ್ಮ ಪ್ರತಿಭೆ ಹೊರಬರಲಿ” ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಉಪ ಪ್ರಾಂಶುಪಾಲ ಡಾ. ರಾಜೇಶ್ ಬಿ ಹಾಗೂ ಕಾರ್ಯಕಾರಿ ಸಮಿತಿ ಮುಖ್ಯಸ್ಥೆ ವೈದೇಹಿ ಎಸ್, ಸದಸ್ಯರಾದ ಸುಭಾಷ್ ರಾವ್ ಬೋಳೂರು, ಮನೋಹರ್ ಶೆಟ್ಟಿ, ಅಶ್ವಿನಿ ಎಚ್ ಆರ್, ಅಂಬಿಕಾ ಕೆ ಹಾಗೂ ಪ್ರಾಧ್ಯಾಪಕ ವೃಂದ ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ಚಾರಿತ್ರ ಜೈನ್ ಕಾರ್ಯಕ್ರಮ ನಿರೂಪಿಸಿ, ರಚನ ಬಿ.ಜೆ.ಅತಿಥಿ ಪರಿಚಯ ನೀಡಿ, ಭಾಗ್ಯಲಕ್ಷ್ಮಿ ಸ್ವಾಗತಿಸಿ, ಸ್ಮೃತಿ ಧನ್ಯವಾದ ಸಲ್ಲಿಸಿದರು.

Related posts

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಿಂತನಾ ದಿನಾಚರಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಚಿನ್ನದ ಆಸೆ ತೋರಿಸಿ ಕರೆಸಿಕೊಂಡ ಆರೋಪಿಗಳು: ಬೀರನಕಲ್ಲು ಬೆಟ್ಟದ ಬಳಿ ಮಚ್ಚು, ಲಾಂಗ್, ಡ್ಯಾಗರ್‌ನಿಂದ ಹಲ್ಲೆ ಮಾಡಿ ಕೊಲೆ ತುಮಕೂರು ಎಸ್ಪಿ ಅಶೋಕ್ ಕೆವಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

Suddi Udaya

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

Suddi Udaya

ತಣ್ಣೀರುಪಂತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!