23.9 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ ಪಲ್ಗುಣಿ ನದಿ ಪರಿಸರದಲ್ಲಿ ನೀರು ನಾಯಿ

ಗರ್ಡಾಡಿ ಗ್ರಾಮದ ಕುಬಳಬೆಟ್ಟು ಗುತ್ತು ಪರಿಸರದ ಪಲ್ಗುಣಿ ನದಿ ತಟದ ಹಳ್ಳದಲ್ಲಿ ಕಳೆದ ಕೆಲವು ದಿನಗಳಿಂದ ನೀರು ನಾಯಿಗಳು ಕಂಡು ಬರುತ್ತಿವೆ.

ಇಲ್ಲಿನ ಕೆ. ಸಂಪತ್ ಕುಮಾರ್ ಕೊಂಬ ಎಂಬವರ ಮನೆಯ ಸಮೀಪ ಕೃಷಿ ತೋಟದಲ್ಲಿ ಹರಿಯುವ ಹಳ್ಳದಲ್ಲಿ ಆಗಾಗ ನೀರು ನಾಯಿಗಳು ಕಂಡು ಬರುತ್ತಿವೆ. ಈ ಹಿಂದಿನ ವರ್ಷಗಳಲ್ಲೂ ಈ ಸ್ಥಳದಲ್ಲಿ ನೀರು ನಾಯಿಗಳು ಕಂಡುಬಂದಿದ್ದವು.
ಸಮೀಪದಲ್ಲಿ ಹರಿಯುವ ಪಲ್ಗುಣಿ ನದಿಯನ್ನು ಸೇರುವ ಈ ಹಳ್ಳದಲ್ಲಿ ಸುಮಾರು ಹತ್ತಕ್ಕಿಂತ ಅಧಿಕ ನೀರು ನಾಯಿ ಮರಿಗಳು ಆಗಾಗ ಆಟ ಆಡುವುದು ಕಂಡುಬರುತ್ತಿದೆ. ಆದರೆ ದೊಡ್ಡ ನೀರು ನಾಯಿಗಳು ಹಳ್ಳದಲ್ಲಿ ಬರುವುದು ತೀರಾ ಅಪರೂಪ. ಪಲ್ಗುಣಿ ನದಿ ತಟದಲ್ಲಿ ಸುಮಾರು 25ಕ್ಕಿಂತ ಅಧಿಕ ನೀರು ನಾಯಿಗಳು ಇರುವ ಶಂಕೆ ವ್ಯಕ್ತವಾಗಿದೆ.

ನೀರು ನಾಯಿ ಸಂತತಿ ಅಳಿವಿನಂಚಿನಲ್ಲಿದೆ. ಪಲ್ಗುಣಿ ನದಿ ಪ್ರದೇಶದ ಕುಬಳಬೆಟ್ಟು ಪರಿಸರದಲ್ಲಿ ಮಾತ್ರ ಹೆಚ್ಚಾಗಿ ಇವು ಕಂಡುಬರುತ್ತಿವೆ.

ಪಲ್ಗುಣಿ ನದಿ ಪ್ರದೇಶದ ಈ ಪರಿಸರದಲ್ಲಿ ಜನರು ಪ್ರಸ್ತುತ ನದಿಯತ್ತ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಈ ಬಾರಿ ಮಳೆ ಪ್ರಮಾಣ ತೀವ್ರ ಕಡಿಮೆ ಇದ್ದು ನದಿಯಲ್ಲಿ ನೀರಿನ ಹರಿವು ಕಡಿಮೆ ಇದೆ. ಈ ಕಾರಣದಿಂದ ನೀರು ನಾಯಿಗಳು ಆಗಾಗ ಆಹಾರ ಅರಸಿಕೊಂಡು ಹಳ್ಳದತ್ತ ಬರುತ್ತಿವೆ.

Related posts

ಒಕ್ಕಲಿಗ ಮುಖಂಡರಿಂದ ಆದಿಚುಂಚನಗಿರಿ ಶ್ರೀಗಳ ಭೇಟಿ

Suddi Udaya

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Suddi Udaya

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

Suddi Udaya

ಬೂಡುಮುಗೇರುನಲ್ಲಿ ರಸ್ತೆಯ ಹೊಂಡಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಸ್ಥಳೀಯರು

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ (ಪ್ರೌಢಶಾಲಾ ವಿಭಾಗ,) : ಶಾಲಾ ವಿದ್ಯಾರ್ಥಿ ಸರಕಾರಕ್ಕೆ ತಂತ್ರಜ್ಞಾನ ಬಳಸಿ ಮತದಾನ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

Suddi Udaya
error: Content is protected !!