23.9 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ಕಾವ್ಯ ವಾಚನ-ಪ್ರವಚನ ಉದ್ಘಾಟನೆ


ಉಜಿರೆ: ಜ್ಞಾನ ದಾಸೋಹದಿಂದ ಆತ್ಮನ ಸಾಕ್ಷಾತ್ಕಾರವಾಗಿ ಭಗವಂತನ ಸಾನ್ನಿಧ್ಯದೊಂದಿಗೆ ಶಾಶ್ವತ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಕನ್ಯಾಡಿ ರಾಮಕ್ಷೇತ್ರದ ಪೀಠಾಧಿಪತಿಗಳಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ಅವರು ಜು.16 ರಂದು ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ 55ನೇ ವರ್ಷದ ಪುರಾಣ-ಕಾವ್ಯ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪುರಾಣ ಕಾವ್ಯ ವಾಚನ- ಪ್ರವಚನ ಅಮೂಲ್ಯ ಜ್ಞಾನಸತ್ರವಾಗಿದ್ದು, ಶ್ರೋತೃಗಳು ಆಧ್ಯಾತ್ಮದಲ್ಲಿ  ತೊಡಗಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ. ದೇಹ ನಶ್ವರ ಹಾಗೂ ಆತ್ಮ ಶಾಶ್ವತವಾಗಿದ್ದು ನಮ್ಮ ಕರ್ತವ್ಯ ಮತ್ತು ಕರ್ಮವನ್ನು ಪ್ರಾಮಾಣಿಕವಾಗಿ ನಿಷ್ಠೆಯಿಂದ ಮಾಡಬೇಕು. ಜ್ಞಾನಯೋಗ ಮತ್ತು ಕರ್ಮಯೋಗದಿಂದ ಮಾತ್ರ ಶಾಶ್ವತ ಸುಖವನ್ನೀಯುವ ಮೋಕ್ಷ ಪ್ರಾಪ್ತಿಯಾಗುತ್ತದೆ. ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಅರಿಷಡ್ವರ್ಗಗಳನ್ನು ಗೆಲ್ಲಬೇಕು. ಆಗ ಮಾತ್ರ ಶ್ರದ್ಧಾ-ಭಕ್ತಯಿಂದ ಧರ್ಮದ ಮರ್ಮವನ್ನರಿತು ಸುಖ-ಶಾಂತಿ, ನೆಮ್ಮದಿ ಪಡೆಯಬಹುದು. “ಸಮ್ಯಕ್‌ದರ್ಶನ, ಜ್ಞಾನ, ಚಾರಿತ್ರಾಣಿ ಮೋಕ್ಷ ಮಾರ್ಗಃ” ಅಂದರೆ ರತ್ನತ್ರಯ ಧರ್ಮದ ಪಾಲನೆಯಿಂದ ಶಾಶ್ವತ ಸುಖ ಪಡೆಯಬಹುದು ಎಂಬ ಜೈನಧರ್ಮದ ಸಾರವನ್ನು ಸ್ವಾಮೀಜಿ ವಿಶೇಷವಾಗಿ ಉಲ್ಲೇಖಿಸಿದರು.

ಸಮಯ ಅಮೂಲ್ಯವಾಗಿದೆ, ಸದುಪಯೋಗ ಮಾಡಿ: ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಸಮಯ ಅಮೂಲ್ಯವಾಗಿದ್ದು ಅದರ ಸದುಪಯೋಗ ಮಾಡಬೇಕು. ಎಲ್ಲರಿಗೂ ಕಾಲಪ್ರಜ್ಞೆ ಇರಬೇಕು. ಧರ್ಮದ ಮರ್ಮವನ್ನರಿತು ಅನುಷ್ಠಾನ ಮಾಡಿದರೆ ಜೀವನ ಪಾವನವಾಗುತ್ತದೆ. ಧರ್ಮದಿಂದ ವಿಮುಖರಾದರೆ ಸರ್ವನಾಶವಾಗುತ್ತದೆ. ಪುರಾಣ ಕಾವ್ಯ ವಾಚನ-ಪ್ರವಚನದ ಮೂಲಕ ಸಮಯದ ಸದ್ವಿನಿಯೋಗ ಮಾಡಿಕೊಳ್ಳಿ ಎಂದು ಹೆಗ್ಗಡೆಯವರು ಸಲಹೆ ನೀಡಿದರು.
ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಸ್ವಾಗತಿಸಿದರು. ಶ್ರೀನಿವಾಸ ರಾವ್ ಧರ್ಮಸ್ಥಳ ಧನ್ಯವಾದವಿತ್ತರು.

Related posts

ಬಸ್ಸಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ಕಲ್ಲೇರಿ ನಿವಾಸಿ ಇರ್ಫಾನ್ ಬಂಧನ

Suddi Udaya

ಬೆಳ್ತಂಗಡಿಯಲ್ಲಿ ದಕ್ಷ ಜೈನ್ ರವರ ನೂತನ ವಕೀಲರ ಕಛೇರಿ ಶುಭಾರಂಭ

Suddi Udaya

ಶಾಲಾ ಬೇಡಿಕೆಗೆ ರಕ್ಷಿತ್ ಶಿವರಾಂ ಸ್ಪಂದನೆ: ಕಲ್ಲೇರಿ ಶಾಲೆಯಲ್ಲಿ ನೂತನ ಶೌಚಾಯ ನಿರ್ಮಾಣ

Suddi Udaya

ಮಾ.2: ಭಾರತ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಚೇರಿ ಆರಂಭ: ಕೇಂದ್ರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕೃತ ಉದ್ಘಾಟನೆ

Suddi Udaya

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya

ಭೀಕರ ಗಾಳಿ -ಮಳೆ: ಬೆಳ್ತಂಗಡಿ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
error: Content is protected !!