July 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು

ಬೆಳ್ತಂಗಡಿ: ಬಿಸಿರೋಡ್‌ನಲ್ಲಿ ಯುವತಿ ಲಾವಣ್ಯ ಹತ್ಯೆ ಪ್ರಕರಣದ ಆರೋಪಿಯ ಭಾವಚಿತ್ರವನ್ನು ತಿರುಚಿ, ಅದಕ್ಕೆ ಕೇಸರಿ ಶಾಲು ಹಾಗೂ ಕುಂಕುಮವನ್ನು ಸೇರಿಸಿ, “ಭಜರಂಗ ದಳದ ಮುಖಂಡ ಚೇತನ” ಹಾಗೂ “ಭಜರಂಗ ದಳದ ಶಾಖೆಯಿಂದ ತರಬೇತಿ ಪಡೆದಿದ್ದ” ಎಂಬ ಸುಳ್ಳು ಮಾಹಿತಿಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಕೋಮು ಸೌಹಾರ್ದತೆ ಕದಡುವ ಯತ್ನ ನಡೆಸಲಾಗಿದೆ ಎಂದು ಆರೋಪಿಸಿ ಬಂಟ್ವಾಳ ಪೊಲೀಸ್ ಠಾಣೆಗೆ ವಿಹಿಂಪ ನ ಉಪಾಧ್ಯಕ್ಷ ಕೇಶವ ರವರು ದೂರು ನೀಡಿದ್ದಾರೆ.

ದೂರಿನ ಪ್ರಕಾರ, ಆರೋಪಿಯ ತಿರುಚಿದ ಭಾವಚಿತ್ರ ಹಾಗೂ ಪ್ರಚೋದನಕಾರಿ ಸಂದೇಶಗಳನ್ನು ವಾಟ್ಸ್ ಆಪ್ ಗ್ರೂಪ್ ಗಳು ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳ ಮೂಲಕ ವ್ಯಾಪಕವಾಗಿ ಹಂಚಲಾಗಿದ್ದು, ಇದರಿಂದ ಸಮಾಜದಲ್ಲಿ ಕೋಮು ಉದ್ವಿಗ್ನತೆ ಮತ್ತು ಗಲಭೆಗಳು ಸೃಷ್ಟಿಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ಪ್ರಕರಣ ದಾಖಲಾದ ಖಾತೆಗಳು: ಒಟ್ಟು 6 ಸಾಮಾಜಿಕ ಜಾಲತಾಣ ಖಾತೆಗಳು/ಗುಂಪುಗಳು ಆರೋಪಿಗಳ ಪಟ್ಟಿಯಲ್ಲಿ ಉಲ್ಲೇಖವಾಗಿದೆ .1: troll_master_Instagram account 2: Yuva Belthangady: WhatsApp group 3: Padmaraj Pari group: WhatsApp 4: Anwar group WhatsApp 5: Yuva Congress Belthangady WhatsApp 6: Facts and Justice WhatsApp ಗ್ರೂಪಿನ ಮೇಲೆ ಎಫ್ ಐಆರ್ ದಾಖಲಾಗಿದೆ.

ಈ ಸಂಬಂಧ ಕಾನೂನುಬಾಹಿರ ಕೃತ್ಯ ಎಸಗಿರುವವರನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ಓಡಿಲ್ನಾಳ: ಮೇಗಿನ‌ ಮೈರಾರು ನಿವಾಸಿ ವೆಂಕಟೇಶ್‌ ಬೈಪಾಡಿತ್ತಾಯ ನಿಧನ

Suddi Udaya

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya

ಎಕ್ಸೆಲ್ ಉಪನ್ಯಾಸಕರಿಂದ ಸಾಂಸ್ಕೃತಿಕ ವೈಭವ

Suddi Udaya

ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ‌.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

Suddi Udaya
error: Content is protected !!