28.8 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಕಚೇರಿಯ ಎಂ. ಮೃತ್ಯುಂಜಯ, ಕೊರಗಪ್ಪ ಹೆಗ್ಡೆ, ಅನಿತಾ ಶಿಂಗಾಯಿ ಉಪ ತಹಸೀಲ್ದಾರ್ ಆಗಿ ಭಡ್ತಿ

ಬೆಳ್ತಂಗಡಿ : ಮೈಸೂರು ವಿಭಾಗದಲ್ಲಿ ಖಾಲಿವಿರುವ ಉಪ ತಹಸೀಲ್ದಾರ್ ವೃಂದದ ಹುದ್ದೆಗಳಿಗೆ ಪ್ರಥಮ ದರ್ಜೆ ಸಹಾಯಕರನ್ನು ಮುಂಭಡ್ತಿ ನೀಡಿ ಸ್ಥಳ ನಿಯುಕ್ತಿಗೊಳಿಸಿ ಸರಕಾರ ಆದೇಶಿಸಿದೆ.

ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕರಾದ ಎಂ. ಮೃತ್ಯುಂಜಯ ಅವರನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಚುನಾವಣೆ ಶಾಖೆಯ ಶಿರಸ್ತೇದಾರ್ ಆಗಿ ಮುಂಭಡ್ತಿ ಮಾಡಲಾಗಿದೆ. ಕೆಪಿಎಸ್ ಸಿ ಪರಿಕ್ಷೇಯಲ್ಲಿ ತೆರ್ಗೇಡೆ ಹೊಂದಿ ಕಳೆದ 7 ವರ್ಷಗಳಿಂದ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಮೂಲತ ದಾವಣಗೆರೆ ಜಿಲ್ಲೆಯವರು.

ತಾಲೂಕು ಚುನಾವಣಾ ಶಾಖೆಯ ಪ್ರ. ದ. ಸಹಾಯಕರಾಗಿದ್ದ ಕೊರಗಪ್ಪ ಹೆಗ್ಡೆ ಅವರನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಉಪ ತಹಶೀಲ್ದಾರ್ ಆಗಿ ಬಣಕಲ್ ನಾಡಕಛೇರಿಗೆ ಸ್ಥಳ ನಿಯುಕ್ತಿಗೊಳಿಸಲಾಗಿದೆ. ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಕಳೆದ ಮೂರು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಅವರು ಮೂಲತ ಬೆಳ್ತಂಗಡಿಯವರು.

ತಾಲೂಕು ಕಚೇರಿಯ ಪ್ರ. ದ. ಸಹಾಯಕಿ ಅನಿತಾ ಶಿಂಗಾಯಿ ಅವರನ್ನು ಸುಳ್ಯ ತಾಲೂಕಿನ ತಾಲೂಕು ಕಚೇರಿಯ ಸಾಮಾಜಿಕ ಭಧ್ರತಾ ಶಾಖೆಗೆ ಮುಂಭಡ್ತಿ ಮಾಡಲಾಗಿದೆ. ಕೆಪಿಎಸ್ ಸಿ ಪರಿಕ್ಷೇಯಲ್ಲಿ ತೆರ್ಗೇಡೆ ಹೊಂದಿ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ವೃತ್ತಿ ಜೀವನ ಆರಂಭಿಸಿದ ಅವರು ಕಳೆದ 7 ವರ್ಷಗಳಿಂದ ಬೆಳ್ತಂಗಡಿಯಲ್ಲಿ ಸೇವೆ ಸಲ್ಲಿಸಿದ ಇವರು ಮೂಲತ ಬೆಳಾಗಾವಿ ಜಿಲ್ಲೆಯವರು.

Related posts

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya

ಮೇಲಂತಬೆಟ್ಟು : ಲಕ್ಷ್ಮೀಯಮ್ಮ ನಿಧನ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

Suddi Udaya
error: Content is protected !!